ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಸಿದ್ಧಗಂಗ ಮಠಕ್ಕೆ ಬುಧವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಸೋಮಣ್ಣನವರು ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತವೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದರು.
ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿಯವರ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…