ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಸಿದ್ಧಗಂಗ ಮಠಕ್ಕೆ ಬುಧವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಸೋಮಣ್ಣನವರು ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತವೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದರು.
ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿಯವರ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…