ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಂಕರಣ್ಣ(45) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು.
ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋಗಿದ್ದ ಶಂಕರಣ್ಣನವರು, ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
2021ರ ಅಕ್ಟೋಬರ್ 21ರಂದು ಈ ಜೋಡಿ ಮದುವೆಯಾಗಿತ್ತು. ಇಬ್ಬರ ನಡುವೆ 15 ವರ್ಷ ಅಂತರವಿದ್ದರೂ ಮದ್ವೆಯಾಗಿದ್ದರು, ಮೇಘನಾ ಶಂಕರಣ್ಣಗಿಂದಲೂ 15 ವರ್ಷ ಚಿಕ್ಕವರಾಗಿದ್ದು, ಇದೇ ಕಾರಣಕ್ಕೆ ದೇಶಾದ್ಯಂತ ಈ ಜೋಡಿ ವೈರಲ್ ಆಗಿತ್ತು. ಖುದ್ದು ಶಂಕರಣ್ಣ ಬಳಿ ಮೇಘನಾ ಮದ್ವೆ ನಿವೇದನೆ ಮಾಡಿದ್ದರು. ಆವರೆಗೂ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿದ್ದರು. ಸಮೀಪದ ದೇವಾಲಯದಲ್ಲಿ ಶಂಕರ್-ಮೇಘನಾ ಮದುವೆಯಾಗಿದ್ದರು.
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…
ಆ. 11 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಬೆಂಗಳೂರು: ಕರಾವಳಿಯ ರೈಲು ಪ್ರಯಾಣಿಕರಿಗೆ ಸಿಹಿ…
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…