Featured

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ

ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿದ್ದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಬೈಕ್ ಅಪಘಾತದ ಪ್ರಕರಣ ಭೇದಿಸಿದ ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸರು ಅಸಲಿ ಕಹಾನಿ ಬಿಚ್ಚಿಟ್ಟಿದ್ದಾರೆ.

ದುಡ್ಡು ಅಂದರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಅಂಥ ದುಡ್ಡಿಗಾಗಿ ಎಂಥ ಹೇಯ ಕೃತ್ಯ ಮಾಡಲು ಜನ ಹಿಂದೂ ಮುಂದೂ ನೋಡಲ್ಲ. ಇಲ್ಲೊಬ್ಬ ಅಣ್ಣ, ತಮ್ಮನ ಹೆಸರಲ್ಲಿ ಇರುವ ಎಲ್‌ಐಸಿ ಪಾಲಿಸಿ ಹಣ ಲಪಟಾಯಿಸಲು ಸ್ವಂತ ತಮ್ಮನನ್ನೇ ಕೊಲೆ ಮಾಡಿ ಬೈಕ್ ಅಪಘಾತ ಎಂದು ಕಥೆ ಕಟ್ಟಿದ್ದಾನೆ.

ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದೊಂದು ಘಟನೆ ನಡೆದಿದೆ. 35 ವರ್ಷದ ರಮೇಶ್‌ನನ್ನು ಅಣ್ಣ ಹನುಮಂತರಾಜು ಕೊಲೆ ಮಾಡಿ ನಾಟಕವಾಡಿದ್ದಾನೆ. ಮೃತ ರಮೇಶ್ ಮೂಲತಃ ಆಂಧ್ರಪ್ರದೇಶದವನು. ಕಳೆದ 6 ವರ್ಷದಿಂದ ಬೆಂಗಳೂರಿನಲ್ಲಿ ಎಳನೀರು ವ್ಯಾಪಾರ ಮತ್ತು ಮಂಡ್ಯದಲ್ಲಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡಿಕೊಂಡಿದ್ದ. ಹೆಂಡತಿಯಿಂದ ದೂರವಾಗಿ ಮಾಟಮಂತ್ರ ಮಾಡುವ ವೃತ್ತಿಯಲ್ಲಿ ತೊಡಗಿದ್ದ. ಅಲ್ಲದೇ ತನ್ನ ಸ್ವಂತ ಅಣ್ಣಂದಿರ ಸಂಸಾರಕ್ಕೆ ಮಾಟಮಂತ್ರ ಮಾಡಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ.

ತಮ್ಮ ರಮೇಶ್ ಹೆಸರಿಗೆ ಅಣ್ಣ ಹನುಮಂತರಾಜು 15 ಲಕ್ಷ ರೂಪಾಯಿ ಎಲ್‌ಐಸಿ ಪಾಲಿಸಿ ಮಾಡಿಸುತ್ತಾನೆ. ಅದರ ನಾಮಿನಿ ತನ್ನ ಹೆಸರಿಗೆ ಮಾಡಿಸಿಕೊಳ್ಳುತ್ತಾನೆ. ಅಣ್ಣ ಹನುಮಂತರಾಜು ಪ್ರತಿ ವರ್ಷಕ್ಕೆ ತಮ್ಮನ ಪಾಲಿಸಿಗೆ 85,000 ರೂ. ವಿಮಾ ಕಂತನ್ನು ಪಾವತಿ ಮಾಡುತ್ತಾನೆ. ಚಾಲ್ತಿಯಲ್ಲಿ ಇರುವ ವಿಮೆಯು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ನಾಮಿನಿದಾರರಿಗೆ ವಿಮೆ ಮೊತ್ತದ ಡಬಲ್ ಹಣ ಅಂದರೆ 30 ಲಕ್ಷ ಹಣ ಪಾವತಿಯಾಗುವಂತೆ ಇತ್ತು. ಈ ಹಣದ ದುರಾಸೆಯಿಂದ ಆರೋಪಿ ಹನುಮಂತರಾಜು ತಮ್ಮನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ನವಯುಗ ಟೋಲ್ ಬಳಿಯ ತನ್ನ ಅಂಗಡಿಗೆ ಬರುತಿದ್ದ ಲಕ್ಷ್ಮೀಕಾಂತ, ನವೀನ್ ಹಾಗೂ ಎಂ.ಡಿ.ಜಿಲಾನ್ ಜೊತೆ ಸೇರಿ ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ.

ಕಳೆದ ಜೂನ್ 19ರಂದು ಯಾವುದೋ ನಿಧಿ ಪೂಜೆ ಇದೆ ಎಂದು ರಮೇಶ್‌ನನ್ನು ಶಿರಾ ಅಮರಾಪುರ ರಸ್ತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಅಲ್ಲಿ ದೊಣ್ಣೆಯಿಂದ ಆತನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಕಾರು ಹರಿಸಿದ್ದಾರೆ. ಆಗಲೂ ಜೀವ ಹೋಗದಿದ್ದಾಗ ಬ್ಯಾಟರಿ ಜಂಪಿಂಗ್ ವಯರ್ ಮೂಲಕ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಶವ ಹಾಗೂ ಬೈಕನ್ನು ರಸ್ತೆಯಲ್ಲಿ ಹಾಕಿದ್ದಾರೆ. ಬಳಿಕ ಬೈಕ್‌ನ ಮುಂಭಾಗವನ್ನು ಇವರೇ ಜಖಂ ಮಾಡಿ ಅಪಘಾತದ ನಾಟಕ ಮಾಡಿದ್ದಾರೆ.

ಮೃತನ ಹಿರಿಯ ಅಣ್ಣ ರಂಗನಾಥ ಕೊಟ್ಟ ದೂರಿನ ಪ್ರಕಾರ ಪೊಲೀಸರು ಅನುಮಾನಸ್ಪದ ಸಾವು ಎಂದು ಎಫ್‌ಐಆರ್ ದಾಖಲಿಸಿದರು. ನಂತರ 3 ತಂಡಗಳನ್ನು ರಚಿಸಿದ ಪೊಲೀಸರು ಆರೋಪಿ ಹನುಮಂತರಾಜು ಸೇರಿ ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

11 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

12 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

12 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

14 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

14 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

14 hours ago