ತುಲಾ ರಾಶಿಯವರೇ ನಿಮ್ಮ ವೈರಿಗಳ ಕುರಿತು ಎಚ್ಚರಿಕೆ ಇರಲಿ , ನೋಡಿ ಇಂದಿನ ರಾಶಿ ಭವಿಷ್ಯ -ಶ್ರೀ ಗಣಪತಿ ಭಟ್ 8088827292 -Vishwanews24

ಮೇಷ:- ಇದುವರೆಗೂ ಸವೆಸಿದ ದಾರಿಗಳಿಗಿಂತ ಬೇರೆ ದಾರಿಯನ್ನೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೇರಳವಾಗಿರುವುದು. ಆದರೆ ಆ ದಾರಿಯಲ್ಲಿ ಕೂಡಾ ನೀವು ನಿಮ್ಮದೇ ಆದ ಛಾಪನ್ನು ಅಥವಾ ಹೆಜ್ಜೆ ಗುರುತುಗಳನ್ನು ಮೂಡಿಸುವಿರಿ.

ವೃಷಭ:- ಕಾಲ ಒಂದೇ ತೆರನಾಗಿರುವುದಿಲ್ಲ. ಹಾಗಾಗಿ ಎಂದಿನ ನಗೆ, ತಮಾಷೆಯನ್ನು ಮಾಡಲು ಹೋಗಿ ಕಚೇರಿಯಲ್ಲಿ ಬಾಸ್‌ ಕೆಂಗಣ್ಣಿಗೆ ಗುರಿ ಆಗುವಿರಿ. ಆದಷ್ಟು ಸೌಮ್ಯತೆಯಿಂದ ಇರುವುದನ್ನು ಕಲಿಯಿರಿ. ಇದರಿಂದ ಒಳಿತಾಗುವುದು.

ಮಿಥುನ:- ಒಗಟಾಗಿ ಮಾತನಾಡುವ ಮಂದಿ ನಿಮ್ಮನ್ನು ಉದ್ರೇಕಿಸುತ್ತಾರೆ. ಆದರೆ ಅದನ್ನು ಗಹನವಾಗಿ ತೆಗೆದುಕೊಳ್ಳದೆ ತಿಳಿಹಾಸ್ಯದಿಂದ ಅವರೆಲ್ಲರನ್ನು ಸಂಭಾಳಿಸುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ಹೆಚ್ಚಿನ ಪ್ರಗತಿ ಕಂಡುಬರುವುದಿಲ್ಲ.

ಕಟಕ:- ಆರೋಗ್ಯವನ್ನು ಅಲಕ್ಷಿಸಬಾರದು ಎಂಬುದು ನೆನಪಿರಲಿ. ಕೆಲಸಕ್ಕೆ ರಜೆ ಹಾಕಿಯಾದರೂ ವೈದ್ಯರನ್ನು ಸಂಪರ್ಕಿಸಿ. ಅವರ ಸಲಹೆಯನ್ನು ಪಡೆಯಿರಿ. ಸಂಜೆಯ ವೇಳೆಗೆ ನಿಮಗೆ ಇಷ್ಟವಾದ ಪುಸ್ತಕ ಇಲ್ಲವೆ ಕಾದಂಬರಿಯನ್ನು ಓದಿ.

ಸಿಂಹ:- ನಿಮ್ಮ ಲೇವಾದೇವಿ ವ್ಯವಹಾರದ ಪತ್ರಗಳು ಮತ್ತು ಬ್ಯಾಂಕ್‌ ವ್ಯವಹಾರದ ಪತ್ರಗಳನ್ನು ಹೊರಗಡೆ ಕೊಂಡೊಯ್ಯುವಾಗ ಜಾಗ್ರತೆ ಇರಲಿ. ಕೆಲವು ಪತ್ರಗಳು ಕಣ್ಮರೆ ಆಗುವ ಸಾಧ್ಯತೆಗಳು ಇವೆ. ಅಪರಿಚಿತ ಜನರೊಡನೆ ಹೆಚ್ಚು ಸಲುಗೆ ಬೇಡ.

ಕನ್ಯಾ:- ಬೇಡ ಬೇಡ ಎಂದರೂ ಒತ್ತಡ ತರುವ ಮಂದಿ ಹಣಕ್ಕೆ ಸಂಚಕಾರ ತರುವ ಸಾಧ್ಯತೆ ಇದೆ. ಹಾಗಾಗಿ ನೀವು ನಿಷ್ಠುರ ವ್ಯಕ್ತಿ ಎನಿಸಿಕೊಂಡರೂ ಪರವಾಗಿಲ್ಲ. ಅನ್ಯರಿಗೆ ಹಣಕಾಸಿನ ನೆರವು ನೀಡದಿರಿ.

ತುಲಾ:- ನಿಮ್ಮ ವೈರಿಗಳ ಕುರಿತು ಎಚ್ಚರಿಕೆ ಇರಲಿ. ಮೈಮರೆಯಬೇಡಿ. ಅವರು ನಿಮ್ಮನ್ನು ಯಾವ ರೀತಿಯಲ್ಲಾದರೂ ಖೆಡ್ಡಾಕ್ಕೆ ಕೆಡವಿಕೊಳ್ಳುವ ಸಾಧ್ಯತೆ ಇದೆ. ಮನೆಯಿಂದ ಹೊರಗಡೆ ಹೊರಡುವಾಗ ಭಯ ರಕ್ಷಕನಾದ ಶ್ರೀ ಲಕ್ಷ್ಮೀನಾರಸಿಂಹನನ್ನು ನೆನೆಯಿರಿ.

ವೃಶ್ಚಿಕ:- ಹೊಗಳುವ ಮಂದಿಯನ್ನು ನಂಬಬೇಡಿ. ಆದರೆ ನಂಬಿದಂತೆ ನಂಬಿ ಅವರು ತಿಳಿಸುವ ವಿಚಾರಗಳಲ್ಲಿ ಕೆಲವು ವಿಚಾರಗಳಿಗೆ ಸಮ್ಮತಿ ಸೂಚಿಸಿ. ಅವರ ನಿಜವಾದ ಆಂತರ್ಯ ನಿಮಗೆ ತಿಳಿಯುವುದು. ಇದರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಹೊಸತನ ಮೂಡಿಬರಲಿದೆ.

ಧನುಸ್ಸು:- ನಿಮಗೆ ಅನಾರೋಗ್ಯ ಕಾಡುವ ಸಾಧ್ಯತೆ ಇದೆ. ಅದರಿಂದ ರಕ್ಷಣೆ ಪಡೆಯಲು ಸೂರ್ಯ ಮಂತ್ರ ಇಲ್ಲವೆ ಸೂರ್ಯ ಕವಚ ಪಠಿಸಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಬಿಗಿ ಧೋರಣೆ ತಳೆಯುವುದು ಒಳ್ಳೆಯದು.

ಮಕರ:- ಬಾಳಸಂಗಾತಿಯ ಮಾತುಗಳನ್ನು ಆಲಿಸಿ. ಅವುಗಳನ್ನು ಪಾಲಿಸಲು ಪ್ರಯತ್ನಿಸಿ. ದಿನವೂ ರಗಳೆ ಎಂದು ರೇಗಾಡಬೇಡಿ. ಅವರು ಆಡುವ ಮಾತುಗಳ ಸತ್ಯಾಸತ್ಯತೆ ಸಂಜೆಯೊಳಗೆ ನಿಮ್ಮ ಅನುಭವಕ್ಕೆ ಬರುವ ಸಾಧ್ಯತೆ ಇದೆ.

ಕುಂಭ:- ನಿಮ್ಮ ಪಾಲಿಗೆ ಅದೃಷ್ಟ ಬರಲಾರದು ಎಂದು ನಿರಾಶರಾಗಬೇಡಿ. ನಿಮಗೆ ಬರಬೇಕಾದ ಅದೃಷ್ಟ ಮಹತ್ವವುಳ್ಳದ್ದಾಗಿರುವುದರಿಂದ ಅದು ಬರುವುದು ವಿಳಂಬವಾದೀತು ಅಷ್ಟೆ. ಆದರೆ ಅದು ಬಂದ ಮೇಲೆ ಹಿಂದೆ ತಿರುಗಿ ನೋಡುವ ಪ್ರಮೇಯವೇ ಬರುವುದಿಲ್ಲ.

ಮೀನ:- ಮನೋಮಂಡಲದಲ್ಲಿನ ಅನುಮಾನಗಳ ಹುತ್ತ ತಲೆ ಎತ್ತುತ್ತಿರುತ್ತದೆ. ನೀವು ಆಂಜನೇಯ ಸ್ವಾಮಿ ಮಂತ್ರ ಇಲ್ಲವೇ ಗಣಪತಿ ಸ್ತೋತ್ರ ಪಠಿಸಿ. ಸಾಧ್ಯವಾದಲ್ಲಿ ಕಡಲೆಕಾಳು ದಾನ ಮಾಡುವುದು ಕ್ಷೇಮ

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago