Featured

ತುಳುನಾಡಿದ ಆರಾಧ್ಯ ದೈವ ಗುಳಿಗನಿಗೆ ಅವಮಾನಿಸಿದ ಅರಗ ಜ್ಞಾನೇಂದ್ರ ಅವರ ವರ್ತನೆಯನ್ನು ಕ್ಷಮಿಸುವಂತಿಲ್ಲ : ನವೀನ್ ಸಾಲಿಯಾನ್ – Vishwanews24

ದೈವಗಳ ಪವಿತ್ರತೆಗೆ ದಕ್ಕೆ ಉಂಟು ಮಾಡಿದಾಗ ಹೋರಾಟ ಮಾಡಿ ಕಾಪಾಡುವುದು ತುಳುನಾಡಿನವರಾದ ನಮ್ಮ ಆದ್ಯ ಕರ್ತವ್ಯ : ನವೀನ್ ಸಾಲಿಯಾನ್

ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಳುನಾಡಿನ ದೈವಗಳ ಬಗ್ಗೆ ಕೇವಲವಾಗಿ ಮಾತನಾಡಲು ಯಾರು ಎಂದು ಕಾಪು ಬ್ಲಾಕ್ ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಸಾಲಿಯಾನ್ ಪ್ರಶ್ನಿಸಿದ್ದಾರೆ.

ಬೇರೆ ಪಕ್ಷದವರು ಮಾತನಾಡಿದರೆ ತಪ್ಪು ಆದರೆ ಬಿಜೆಪಿಗರು ಏನೇ ಮಾತನಾಡಿದರೂ ಅಥವ ತುಳುನಾಡಿನ ವಿರುದ್ದ ಅವಹೇಳನ ಮಾಡಿದರೆ ಅದನ್ನು ಸಮರ್ಥಿಸುವ ಸಂಸ್ಕೃತಿಗೆ ನಮ್ಮ ಧಿಕ್ಕಾರವಿದೆ. ತುಳುನಾಡಿದ ದೈವಗಳ ಬಗ್ಗೆ ಕನಿಷ್ಠ ಜ್ಞಾನವೂ ಇರದ ಒರ್ವ ಗೃಹಸಚಿವರು ಅನಾಗರಿಕರಾಗಿ ಮಾತನಾಡಿರುವುದು ಖಂಡನೀಯ. ತುಳು ಸಂಸ್ಕೃತಿ ಎಂದರೆ ಅದು ತುಳುವರ ಬದುಕು ಮತ್ತು ನಂಬಿಕೆಯಾಗಿದೆ. ತುಳುನಾಡಿದ ಆರಾಧ್ಯ ದೈವ ಗುಳಿಗನಿಗೆ ಅವಮಾನಿಸಿದ ಅರಗ ಜ್ಞಾನೇಂದ್ರ ಅವರ ವರ್ತನೆಯನ್ನು ಕ್ಷಮಿಸುವಂತಿಲ್ಲ.

ತುಳುನಾಡಿನವರು ಆದ ನಾವು ನಮ್ಮನ್ನು ಕಾಪಾಡುವ ಧರ್ಮ ದೈವಗಳಿಗೆ ಅವಮಾನ ಮಾಡಿದಾಗ ಧರ್ಮ ದೈವಗಳ ಪವಿತ್ರತೆಗೆ ದಕ್ಕೆ ಉಂಟು ಮಾಡಿದಾಗ ದೈವಗಳ ಪಾವಿತ್ರತೆಯನ್ನು ಹೋರಾಟ ಮಾಡಿ ಕಾಪಾಡುವುದು ತುಳುನಾಡಿನವರಾದ ನಮ್ಮ ಆದ್ಯ ಕರ್ತವ್ಯವಾಗಿದ್ದು ಇಂತಹ ಅನಾಗರಿಕ ಹೇಳಿಕೆಯನ್ನು ನೀಡಿದ ಗೃಹಸಚಿವರು ತುಳುನಾಡಿಗರ ಕ್ಷಮೆಯನ್ನು ಯಾಚಿಸುವಂತೆ ನವೀನ್ ಸಾಲಿಯಾನ್ ಆಗ್ರಹಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago