Featured

ತುಳುನಾಡಿದ ಆರಾಧ್ಯ ದೈವ ಗುಳಿಗನಿಗೆ ಅವಮಾನಿಸಿದ ಅರಗ ಜ್ಞಾನೇಂದ್ರ ಅವರ ವರ್ತನೆಯನ್ನು ಕ್ಷಮಿಸುವಂತಿಲ್ಲ : ನವೀನ್ ಸಾಲಿಯಾನ್ – Vishwanews24

ದೈವಗಳ ಪವಿತ್ರತೆಗೆ ದಕ್ಕೆ ಉಂಟು ಮಾಡಿದಾಗ ಹೋರಾಟ ಮಾಡಿ ಕಾಪಾಡುವುದು ತುಳುನಾಡಿನವರಾದ ನಮ್ಮ ಆದ್ಯ ಕರ್ತವ್ಯ : ನವೀನ್ ಸಾಲಿಯಾನ್

ಕಾರ್ಯಕ್ರಮವೊಂದರಲ್ಲಿ ಶಿವಧೂತ ಗುಳಿಗ ನಾಟಕದ ಬಗ್ಗೆ ಅವಹೇಳನ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತುಳುನಾಡಿನ ದೈವಗಳ ಬಗ್ಗೆ ಕೇವಲವಾಗಿ ಮಾತನಾಡಲು ಯಾರು ಎಂದು ಕಾಪು ಬ್ಲಾಕ್ ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಸಾಲಿಯಾನ್ ಪ್ರಶ್ನಿಸಿದ್ದಾರೆ.

ಬೇರೆ ಪಕ್ಷದವರು ಮಾತನಾಡಿದರೆ ತಪ್ಪು ಆದರೆ ಬಿಜೆಪಿಗರು ಏನೇ ಮಾತನಾಡಿದರೂ ಅಥವ ತುಳುನಾಡಿನ ವಿರುದ್ದ ಅವಹೇಳನ ಮಾಡಿದರೆ ಅದನ್ನು ಸಮರ್ಥಿಸುವ ಸಂಸ್ಕೃತಿಗೆ ನಮ್ಮ ಧಿಕ್ಕಾರವಿದೆ. ತುಳುನಾಡಿದ ದೈವಗಳ ಬಗ್ಗೆ ಕನಿಷ್ಠ ಜ್ಞಾನವೂ ಇರದ ಒರ್ವ ಗೃಹಸಚಿವರು ಅನಾಗರಿಕರಾಗಿ ಮಾತನಾಡಿರುವುದು ಖಂಡನೀಯ. ತುಳು ಸಂಸ್ಕೃತಿ ಎಂದರೆ ಅದು ತುಳುವರ ಬದುಕು ಮತ್ತು ನಂಬಿಕೆಯಾಗಿದೆ. ತುಳುನಾಡಿದ ಆರಾಧ್ಯ ದೈವ ಗುಳಿಗನಿಗೆ ಅವಮಾನಿಸಿದ ಅರಗ ಜ್ಞಾನೇಂದ್ರ ಅವರ ವರ್ತನೆಯನ್ನು ಕ್ಷಮಿಸುವಂತಿಲ್ಲ.

ತುಳುನಾಡಿನವರು ಆದ ನಾವು ನಮ್ಮನ್ನು ಕಾಪಾಡುವ ಧರ್ಮ ದೈವಗಳಿಗೆ ಅವಮಾನ ಮಾಡಿದಾಗ ಧರ್ಮ ದೈವಗಳ ಪವಿತ್ರತೆಗೆ ದಕ್ಕೆ ಉಂಟು ಮಾಡಿದಾಗ ದೈವಗಳ ಪಾವಿತ್ರತೆಯನ್ನು ಹೋರಾಟ ಮಾಡಿ ಕಾಪಾಡುವುದು ತುಳುನಾಡಿನವರಾದ ನಮ್ಮ ಆದ್ಯ ಕರ್ತವ್ಯವಾಗಿದ್ದು ಇಂತಹ ಅನಾಗರಿಕ ಹೇಳಿಕೆಯನ್ನು ನೀಡಿದ ಗೃಹಸಚಿವರು ತುಳುನಾಡಿಗರ ಕ್ಷಮೆಯನ್ನು ಯಾಚಿಸುವಂತೆ ನವೀನ್ ಸಾಲಿಯಾನ್ ಆಗ್ರಹಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago