Featured

ತುಳುನಾಡಿನ ಇತಿಹಾಸ ಪ್ರಸಿದ್ಧ ಏಳು ಜಾತ್ರೆಗಳಲ್ಲಿ ಒಂದಾಗಿರುವ ಕಾಪುವಿನಲ್ಲಿ ಸುಗ್ಗಿ ಮಾರಿಪೂಜೆಯ ಸಂಭ್ರಮ – Vishwanews24

ತುಳುನಾಡಿನ ಇತಿಹಾಸ ಪ್ರಸಿದ್ಧ ಏಳು ಜಾತ್ರೆಗಳಲ್ಲಿ ಒಂದಾಗಿರುವ ಕಾಪುವಿನಲ್ಲಿ ಸುಗ್ಗಿ ಮಾರಿಪೂಜೆಯ ಸಂಭ್ರಮ – Vishwanews24

ಕಾಪು: ಇಲ್ಲಿನ ಶ್ರೀ ಹಳೇ ಮಾರಿಗುಡಿ, ಶ್ರೀ ಹೊಸ ಮಾರಿಗುಡಿ ಮತ್ತು ಶ್ರೀ ಮೂರನೇ ಮಾರಿಗುಡಿಗಳಲ್ಲಿ ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದ್ದು, ಬುಧವಾರ ಸಂಜೆಯವರೆಗೆ ನಡೆಯಲಿದೆ.

ಸುಗ್ಗಿ ಮಾರಿಪೂಜೆಗೆ ಪೂರ್ವಭಾವಿಯಾಗಿ ಮಂಗಳವಾರ ರಾತ್ರಿ ಕಾಪು ಹಳೇ ಮಾರಿಗುಡಿಗೆ ಶ್ರೀ ವೆಂಕಟರಮಣ ದೇವಸ್ಥಾನ, ಕಾಪು ಹೊಸ ಮಾರಿಗುಡಿ ಮತ್ತು ಕಾಪು ಮೂರನೇ (ಕಲ್ಯ) ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಸಾಂಕೇತಿಕ ಮೂರ್ತಿ ಮತ್ತು ಸ್ವರ್ಣಾಭರಣಗಳನ್ನು ಮೆರವಣಿಗೆಯ ಮೂಲಕ ತರಲಾಯಿತು. ದೇವಿಯ ಸಾಂಕೇತಿಕ ಮೂರ್ತಿ ಮತ್ತು ಹೊಂಗಾರಕನ ಮರದಲ್ಲಿ ಕೆತ್ತಿದ ಮೂರ್ತಿಗಳನ್ನು ಗದ್ದುಗೆಯಲ್ಲಿ ಪ್ರತಿಷ್ಠಾಪಿಸಿ, ಮಾರಿಪೂಜೆಯ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ಗದ್ದುಗೆ ಪೂಜೆ ವಿಶೇಷ
ಗದ್ದುಗೆಯೇ ಪ್ರಧಾನವಾಗಿರುವ ಮಾರಿಯಮ್ಮನ ಸನ್ನಿಧಿಯಲ್ಲಿ ಗದ್ದುಗೆ ಪೂಜೆ ವಿಶೇಷ ಸೇವೆಯಾಗಿದೆ. ಹೂವಿನ ಪೂಜೆ ಸೇವೆ ಸಹಿತ ವಿವಿಧ ಸೇವೆಗಳು, ಹರಕೆಗಳು ಸಮರ್ಪಿಸಲ್ಪಡುತ್ತವೆ. ಕೊರೊನಾ ನಿರ್ಬಂಧಗಳು ತೆರವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಸೇವೆಗಳಿಗೂ ಅವಕಾಶ ನೀಡಿರುವ ಕಾರಣ ಹೆಚ್ಚಿನ ಭಕ್ತರ ಪಾಲ್ಗೊಳ್ಳುವಿಕೆ ನಿರೀಕ್ಷಿಸಲಾಗುತ್ತಿದೆ.

ಬುಧವಾರ ಸಂಜೆ ತೆರೆ
ಮಂಗಳವಾರ ಮಧ್ಯರಾತ್ರಿಯ ಬಳಿಕ ದರ್ಶನ ಸೇವೆ ನಡೆದು, ಬುಧವಾರ ಮಧ್ಯಾಹ್ನದ ವರೆಗೂ ಭಕ್ತರಿಗೆ ಮಾರಿಯಮ್ಮ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬುಧವಾರದ ಮಧ್ಯಾಹ್ನ ಪೂಜೆ ನಡೆದು, ಸಂಜೆ ದರ್ಶನ ಸೇವೆ ನಡೆಯುತ್ತದೆ. ದರ್ಶನ ಸೇವೆಯಲ್ಲಿ ಅಭಯ ಪ್ರಸಾದ ವಿತರಣೆ ಬಳಿಕ ಮಾರಿಯಮ್ಮ ದೇವಿಯ ಮೂರ್ತಿಯನ್ನು ಮೆರವಣಿಗೆಯಲ್ಲಿ ಕರೆದೊಯ್ದು, ವಿಸರ್ಜಿಸುವುದರೊಂದಿಗೆ ಮಾರಿ ಪೂಜಾ ಪೂಜಾ ವಿಧಿಗಳಿಗೆ ತೆರೆ ಎಳೆಯಲಾಗುತ್ತದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago