ಕಾಪು: ಇಲ್ಲಿನ ಬಡಗು ಕಲ್ಯದಲ್ಲಿ ನಿರ್ಮಿಸಿರುವ ಬಬ್ಬುಸ್ವಾಮಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ -ಕಲಾಶಭೀಷೆಕ-ನೇಮೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ಆದಿತ್ಯವಾರ ನಡೆಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಮಾತನಾಡಿ” ತುಳುನಾಡು ಕತ್ತಲೆ ಇಲ್ಲದ ಭೂಮಿ ,ಹಗಲು ಪ್ರಕೃತಿ ಬೆಳಕು ನೀಡಿದರೆ ರಾತ್ರಿ ತುಳುನಾಡಿನಲ್ಲಿ ಧೈವರಾಧನೆಯ ಬೆಳಕು ಹರಿಯುತ್ತಿದೆ ಹಾಗಾಗಿ ಇದೊಂದು ಉನ್ನತ ಮಟ್ಟದ ಆರಾಧನೆ ಯಾಗಿದೆ,ಪ್ರಸ್ತುತ ಅವಿಭಕ್ತ ಕುಟುಂಬ ನಶಿಸಿ ವಿಭಕ್ತ ಕುಟುಂಬವಾಗಿ ಪರಿವರ್ತನೆಯಾಗುತ್ತಿದೆ ಆದರೇ ದೈವದ ಚಾಕರಿ ,ಆರಾಧನೆ,ವಿಚಾರ ಬಂದಾಗ ಅವಿಭಕ್ತವಾಗಿ ಸೇರಿಕೊಂಡು ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಾಲು ಮಾರಾಟ ಮಹಾಮಂಡಳಿ ಬೆಂಗಳೂರು ಇದರ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ,ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೆಸರ ರಮೇಶ್ ಹೆಗ್ಡೆ ಕಲ್ಯಾ,ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಕಾಪು,ಸ್ಥಳ ದಾನಿ ರಾಜು ಶೆಟ್ಟಿ,ಕಲ್ಯಾ ದಿನೇಶ್ ಶೆಟ್ಟಿ, ಉದ್ಯಮಿ ಉಮನಾಥ ಶೆಟ್ಟಿ, ಪುರಸಭಾ ಸದಸ್ಯ ಸುರೇಶ್ ದೇವಾಡಿಗ,ಶೀನಮುಖಾರಿ,ಉಪಸ್ಥಿತರಿದ್ದರು.
ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಕನ್ಯಾನಗುತ್ತು ಸ್ವಾಗತಿಸಿ ,ನೀಲಾನಂದ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ,ಅರುಣ್ ಶೆಟ್ಟಿ ಪಾದೂರು ಧನ್ಯವಾದ ಸಮರ್ಪಿಸಿದರು.
ವರದಿ: ಪುರುಷೋತ್ತಮ ಕಾಪು
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…