ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ.
ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ. ಪ್ರಾದೇಶಿಕ ಭಾಷೆಗಳ ಅಭಿಮಾನದಿಂದ ನಿರ್ಮಾಪಕರು ಚಲನ ಚಿತ್ರ ನಿರ್ಮಿಸುತ್ತಾರೆ. ಯಾವು ಪರಭಾಷೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಸಿನಿಮಾ ನಿರ್ಮಿಸುತ್ತಾರೆ. ಮೂರ್ನಾಲ್ಕು ಸಿನಿಮಾಗಳಿಗೆ ಮಾತ್ರ ಸಬ್ಸಿಡಿ ನೀಡುವ ರಾಜ್ಯ ಸರಕಾರ ಮುಂದಿನ ದಿನಗಳಲ್ಲಿ ಕನಿಷ್ಠ ಹದಿನೈದು ಸಿನಿಮಾಗಳಿಗೆ ಸಬ್ಸಿಡಿ ನೀಡುವಂತೆ ಮನವಿ ನೀಡಿದರು.
ನಿರ್ಮಾಪಕರ ಸಂಘಕ್ಕೆ ಕಟ್ಟಡ ನಿರ್ಮಿಸಲು ಜಾಗ ಮಂಜೂರಿಗೆ ಮನವಿ
ಇದೇ ವೇಳೆ ಮಂಗಳೂರಿನಲ್ಲಿ ತುಳು ಚಲನ ಚಿತ್ರ ನಿರ್ಮಾಪಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಜಮೀನು ಮಂಜೂರು ಮಾಡುವಂತೆ ಅಧ್ಯಕ್ಷ ಆರ್ ಧನರಾಜ್ ಮನವಿ ಮಾಡಿದರು.
ಸದ್ರಿ ಮಂಗಳೂರು ಹೋಬಳಿಯ ಕೊಡಿಯಾಲ್ ಬೈಲ್ ಎ ಗ್ರಾಮದ ಸರ್ವೆ ನಂಬ್ರ 1554 – 2 ಬಿ ಯಲ್ಲಿ ಖಾಲಿ ಜಮೀನು ಸರಕಾರದ ವಶದಲ್ಲಿದ್ದು, ಆ ಜಮೀನಿನಲ್ಲಿ ಐದು ಸೆಂಟ್ಸ್ ಜಾಗವನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿಮಿಸಲು ಜಾಗ ಮಂಜೂರು ಮಾಡಲು ಜಿಲ್ಲಾಧಿಕಾರಿಯವರಿಗೆ ಆದೇಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಯಿತು.
ತುಳು ಚಲನ ಚಿತ್ರ ನಿರ್ಮಾಪಕರ ಸಂಘ ನೀಡಿದ ಮನವಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…