Featured

ತುಳು ಭಾಷಾ ಸ್ಥಾನಮಾನಕ್ಕಾಗಿ ಒಂದಾದ ತುಳುನಾಡಿನ ಜನರು : 3 ಲಕ್ಷಕ್ಕೂ ಅಧಿಕ ಟ್ವೀಟ್‌ -Vishwanews24

ತುಳು ಭಾಷಾ ಸ್ಥಾನಮಾನಕ್ಕಾಗಿ ಒಂದಾದ ತುಳುನಾಡಿನ ಜನರು : 3 ಲಕ್ಷಕ್ಕೂ ಅಧಿಕ ಟ್ವೀಟ್‌ -Vishwanews24

ಭಾರತದ ಟ್ರೆಂಡಿಂಗ್‌ನಲ್ಲಿ ನಂ.1 ಸ್ಥಾನ

ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರ ಸಂಘಟನೆಗಳು ಭಾನುವಾರ ಟ್ವೀಟ್‌ ಅಭಿಯಾನ ನಡೆಸಿದ್ದು, ಇದಕ್ಕೆ 2 ಲಕ್ಷಕ್ಕೂ ಅಧಿಕ ಮಂದಿ ಸ್ಪಂದಿಸಿ ಟ್ವೀಟ್‌ ಮಾಡಿದ್ದಾರೆ.

ತುಳು ಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಹಲವು ಬಾರಿ ಟ್ವೀಟ್‌ ಅಭಿಯಾನ ನಡೆಸಿ ಕೇಂದ್ರ, ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ತುಳು ಭಾಷೆಯನ್ನು ರಾಜ್ಯ ಸರಕಾರ ಇನ್ನೂ ಅಧಿಕೃತ ಮಾನ್ಯತೆ ಪಡೆದ ಭಾಷೆಯಾಗಿ ಪರಿಗಣಿಸದ ಕಾರಣ ಕೇಂದ್ರದಲ್ಲೂಇದಕ್ಕೆ ಗ್ರೀನ್‌ಸಿಗ್ನಲ್‌ ಸಿಕ್ಕಿರಲಿಲ್ಲ. ಇದೀಗ ರಾಜ್ಯ ಸರಕಾರ ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಭಾನುವಾರ ಟ್ವೀಟ್‌ ಅಭಿಯಾನ ನಡೆಸಲಾಗಿದೆ.

ಗಣ್ಯರು, ಸೆಲೆಬ್ರಿಟಿಗಳ ಟ್ವೀಟ್‌

ರಾಜ್ಯ ಸರಕಾರ ತುಳುವಿಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಭಾನುವಾರ ನಡೆದ ಟ್ವೀಟ್‌ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ಡಾ. ವೈ. ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಉಮಾನಾಥ್‌ ಕೋಟ್ಯಾನ್‌, ರಾಜೇಶ್‌ ನಾಯ್ಕ್‌, ಸುನಿಲ್‌ ಕುಮಾರ್‌, ಕೆ.ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ವಕ್ತಾರ ಗಣೇಶ್‌ ಕಾರ್ಣಿಕ್‌, ಮಾಜಿ ಸಚಿವರ ಪ್ರಮೋದ್‌ ಮಧ್ವರಾಜ್‌, ಕಾಂಗ್ರೆಸ್‌ ಯುವನಾಯಕ ಮಿಥುನ್‌ ರೈ, ಬಿಜೆಪಿ ಮುಖಂಡ ಬ್ರಿಜೇಶ್‌ ಚೌಟ, ಸೆಲೆಬ್ರಿಟಿಗಳಾದ ರೂಪೇಶ್‌ ಶೆಟ್ಟಿ, ಅರ್ಜುನ್‌ ಕಾಪಿಕಾಡ್‌, ಪೃಥ್ವಿ ಅಂಬರ್‌, ಚಿರಶ್ರೀ ಅಂಚನ್‌ ಟ್ವೀಟ್‌ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಇದು ಮಾತ್ರವಲ್ಲದೆ ಮಹಾರಾಷ್ಟ್ರ ಏಕೀಕರಣ ಮುಂಬಯಿ ಸಮಿತಿ, ಮಾಧ್ಯಮ ಸಂಸ್ಥೆಗಳು, ತೌಳವ ಅರಸು ವಂಶಸ್ಥರಾದ ಡಾ. ಆಕಾಶ್‌ರಾಜ್‌ ಜೈನ್‌, ಕಾಸರಗೋಡು ತುಳು ಅಭಿಮಾನಿಗಳ ಬಳಗ ಟ್ವೀಟ್‌ನಲ್ಲಿ ಪಾಲ್ಗೊಂಡಿವೆ.

ವರ್ಲ್ಡ್ ಟ್ರೆಂಡಿಂಗ್‌!

ಭಾನುವಾರ ಬೆಳಗ್ಗಿನಿಂದಲೇ ಟ್ವೀಟ್‌ಗಳ ಸರಮಾಲೆ ಆರಂಭವಾಗಿದ್ದವು. ಮಧ್ಯಾಹ್ನದ ವೇಳೆಗೆ ವರ್ಲ್ಡ್ ಟ್ರೆಂಡಿಂಗ್‌ನಲ್ಲಿ 6ನೇ ಸ್ಥಾನಕ್ಕೇರುವ ಮೂಲಕ ಜಗತ್ತಿನ ಗಮನ ಸೆಳೆದಿತ್ತು. ಸಂಜೆ ವೇಳೆಗೆ 1.77 ಲಕ್ಷ ಮಂದಿ ಟ್ವೀಟ್‌ ಮಾಡಿದ್ದರು. ಕಳೆದ ಸಲ ಅಭಿಯಾನ ನಡೆದಾಗ ಭಾರತದ ಟ್ರೆಂಡಿಂಗ್‌ನಲ್ಲಿ ನಂ.1 ಸ್ಥಾನದಲ್ಲಿತ್ತು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago