Featured

ತುಳು ಭಾಷಾ ಸ್ಥಾನಮಾನಕ್ಕಾಗಿ ಒಂದಾದ ತುಳುನಾಡಿನ ಜನರು : 3 ಲಕ್ಷಕ್ಕೂ ಅಧಿಕ ಟ್ವೀಟ್‌ -Vishwanews24

ತುಳು ಭಾಷಾ ಸ್ಥಾನಮಾನಕ್ಕಾಗಿ ಒಂದಾದ ತುಳುನಾಡಿನ ಜನರು : 3 ಲಕ್ಷಕ್ಕೂ ಅಧಿಕ ಟ್ವೀಟ್‌ -Vishwanews24

ಭಾರತದ ಟ್ರೆಂಡಿಂಗ್‌ನಲ್ಲಿ ನಂ.1 ಸ್ಥಾನ

ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರ ಸಂಘಟನೆಗಳು ಭಾನುವಾರ ಟ್ವೀಟ್‌ ಅಭಿಯಾನ ನಡೆಸಿದ್ದು, ಇದಕ್ಕೆ 2 ಲಕ್ಷಕ್ಕೂ ಅಧಿಕ ಮಂದಿ ಸ್ಪಂದಿಸಿ ಟ್ವೀಟ್‌ ಮಾಡಿದ್ದಾರೆ.

ತುಳು ಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಹಲವು ಬಾರಿ ಟ್ವೀಟ್‌ ಅಭಿಯಾನ ನಡೆಸಿ ಕೇಂದ್ರ, ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ತುಳು ಭಾಷೆಯನ್ನು ರಾಜ್ಯ ಸರಕಾರ ಇನ್ನೂ ಅಧಿಕೃತ ಮಾನ್ಯತೆ ಪಡೆದ ಭಾಷೆಯಾಗಿ ಪರಿಗಣಿಸದ ಕಾರಣ ಕೇಂದ್ರದಲ್ಲೂಇದಕ್ಕೆ ಗ್ರೀನ್‌ಸಿಗ್ನಲ್‌ ಸಿಕ್ಕಿರಲಿಲ್ಲ. ಇದೀಗ ರಾಜ್ಯ ಸರಕಾರ ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಭಾನುವಾರ ಟ್ವೀಟ್‌ ಅಭಿಯಾನ ನಡೆಸಲಾಗಿದೆ.

ಗಣ್ಯರು, ಸೆಲೆಬ್ರಿಟಿಗಳ ಟ್ವೀಟ್‌

ರಾಜ್ಯ ಸರಕಾರ ತುಳುವಿಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಭಾನುವಾರ ನಡೆದ ಟ್ವೀಟ್‌ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ಡಾ. ವೈ. ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಉಮಾನಾಥ್‌ ಕೋಟ್ಯಾನ್‌, ರಾಜೇಶ್‌ ನಾಯ್ಕ್‌, ಸುನಿಲ್‌ ಕುಮಾರ್‌, ಕೆ.ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಬಿಜೆಪಿ ವಕ್ತಾರ ಗಣೇಶ್‌ ಕಾರ್ಣಿಕ್‌, ಮಾಜಿ ಸಚಿವರ ಪ್ರಮೋದ್‌ ಮಧ್ವರಾಜ್‌, ಕಾಂಗ್ರೆಸ್‌ ಯುವನಾಯಕ ಮಿಥುನ್‌ ರೈ, ಬಿಜೆಪಿ ಮುಖಂಡ ಬ್ರಿಜೇಶ್‌ ಚೌಟ, ಸೆಲೆಬ್ರಿಟಿಗಳಾದ ರೂಪೇಶ್‌ ಶೆಟ್ಟಿ, ಅರ್ಜುನ್‌ ಕಾಪಿಕಾಡ್‌, ಪೃಥ್ವಿ ಅಂಬರ್‌, ಚಿರಶ್ರೀ ಅಂಚನ್‌ ಟ್ವೀಟ್‌ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಇದು ಮಾತ್ರವಲ್ಲದೆ ಮಹಾರಾಷ್ಟ್ರ ಏಕೀಕರಣ ಮುಂಬಯಿ ಸಮಿತಿ, ಮಾಧ್ಯಮ ಸಂಸ್ಥೆಗಳು, ತೌಳವ ಅರಸು ವಂಶಸ್ಥರಾದ ಡಾ. ಆಕಾಶ್‌ರಾಜ್‌ ಜೈನ್‌, ಕಾಸರಗೋಡು ತುಳು ಅಭಿಮಾನಿಗಳ ಬಳಗ ಟ್ವೀಟ್‌ನಲ್ಲಿ ಪಾಲ್ಗೊಂಡಿವೆ.

ವರ್ಲ್ಡ್ ಟ್ರೆಂಡಿಂಗ್‌!

ಭಾನುವಾರ ಬೆಳಗ್ಗಿನಿಂದಲೇ ಟ್ವೀಟ್‌ಗಳ ಸರಮಾಲೆ ಆರಂಭವಾಗಿದ್ದವು. ಮಧ್ಯಾಹ್ನದ ವೇಳೆಗೆ ವರ್ಲ್ಡ್ ಟ್ರೆಂಡಿಂಗ್‌ನಲ್ಲಿ 6ನೇ ಸ್ಥಾನಕ್ಕೇರುವ ಮೂಲಕ ಜಗತ್ತಿನ ಗಮನ ಸೆಳೆದಿತ್ತು. ಸಂಜೆ ವೇಳೆಗೆ 1.77 ಲಕ್ಷ ಮಂದಿ ಟ್ವೀಟ್‌ ಮಾಡಿದ್ದರು. ಕಳೆದ ಸಲ ಅಭಿಯಾನ ನಡೆದಾಗ ಭಾರತದ ಟ್ರೆಂಡಿಂಗ್‌ನಲ್ಲಿ ನಂ.1 ಸ್ಥಾನದಲ್ಲಿತ್ತು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

12 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

14 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

14 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

14 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

14 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

14 hours ago