ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ : ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಜೊತೆಗೆ ಎರಡನೇ ಭಾಷೆಯಾಗಿ ಸ್ಥಾನಮಾನ ಸಿಗಲು ನಮ್ಮ ಪ್ರಯತ್ನವೂ ಬೇಕಾಗಿದೆ.
ಪ್ರತಿಯೊಬ್ಬರು ಮನೆಯಲ್ಲಿ ತುಳು ಭಾಷೆಯನ್ನೇ ಮಾತನಾಡಬೇಕು, ನಾವೆಲ್ಲರೂ ಮಕ್ಕಳಿಗೂ ತುಳು ಭಾಷೆಯನ್ನೇ ಕಲಿಸಬೇಕು. ಹೀಗಾದರೆ ದೊಡ್ಡ ಮಟ್ಟದಲ್ಲಿ ತುಳು ಭಾಷೆಯನ್ನು ಉಳಿಸಲು ಸಾಧ್ಯವಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.
ಇದನ್ನೂ ಓದಿ :
ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ – vishwanews24
ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ತುಳು ನಮ್ಮ ತಾಯಿ ಭಾಷೆ, ತುಳು ನಮ್ಮ ಹೃದಯದ ಭಾಷೆ. ನಮಗೆ ಕನಸು ಬೀಳುವುದಿದ್ದರೂ ತುಳು ಭಾಷೆಯಲ್ಲೇ ಬೀಳುತ್ತದೆ. ಇದಕ್ಕೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ ಎಂದರು.
ಜೊತೆಗೆ ಕಸ್ತೂರಿ ರಂಗನ್ ವರದಿಗೂ ನಾವು ವಿರೋಧ ವ್ಯಕ್ತಪಡಿಸಬೇಕಾಗಿದೆ. ಕರಾವಳಿ ಅಭಿವೃದ್ಧಿ, ಪ್ರವಾಸೋದ್ಯಮ ಇಲಾಖೆಗೆ ಉತ್ತೇಜನ ನೀಡುವ ಕೆಲಸವನ್ನು ಸರಕಾರ ಮಾಡಬೇಕು ಎಂದರು.
ಇದನ್ನೂ ಓದಿ :
