Featured

ತುಳು ಭಾಷೆಗೆ ಸ್ಥಾನಮಾನ: ತುಳು ಅಧಿಕೃತ ಹಾಗೂ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಹತ್ತರ ನಿರ್ಣಯ ; ತುರ್ತು ಮೀಟಿಂಗ್ ಭರವಸೆ ನೀಡಿದ ವೇದವ್ಯಾಸ ಕಾಮತ್‌ – Vishwanews24

ತುಳು ಭಾಷೆಗೆ ಸ್ಥಾನಮಾನ: ತುಳು ಅಧಿಕೃತ ಹಾಗೂ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಹತ್ತರ ನಿರ್ಣಯ ; ತುರ್ತು ಮೀಟಿಂಗ್ ಭರವಸೆ ನೀಡಿದ ವೇದವ್ಯಾಸ ಕಾಮತ್‌

ಮಂಗಳೂರು: ಮಂಗಳೂರಿನ ಸರಕಾರಿ ಕಛೇರಿ ಹಾಗೂ ಬಸ್ಸುಗಳಲ್ಲಿ ಕನ್ನಡ ಕಡ್ಡಾಯ ಮಾಡಿ ತುಳು ಭಾಷೆಯ ಮೇಲೆ ಸವಾರಿ ಮಾಡಿದ್ದಲ್ಲದೆ ದ.ಕ ಜಿಲ್ಲೆ ಸೇರಿ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಚಿವ ಸುನೀಲ್ ಕುಮಾರ್‌ರವರು ಹೇಳಿಕೆ ನೀಡಿದ ವಿರುದ್ಧ ಇಂದು ಮಂಗಳೂರಿನ ಕ್ಲಾಕ್ ಟವರ್ ಎದುರುಗಡೆ ತುಳು ಭಾಷೆ ಸಂರಕ್ಷಣಾ ಸಮಿತಿಯವರು ಪ್ರತಿಭಟನೆ ನಡೆಸಿದರು.

ಈ ವೇಳೆ ಅದೇ ದಾರಿಯಲ್ಲಿ ಸಾಗುತ್ತಿದ್ದ ಶಾಸಕರಾದ ವೇದವ್ಯಾಸ ಕಾಮತ್‌ರವರು ಭೇಟಿ ಕೊಟ್ಟು ತುಳು ಪರವಾಗಿ ಹೋರಾಟ ಮಾಡುವವರಿಗೆ ಸಾಂತ್ವನ ಹೇಳಿ ನವರಾತ್ರಿ ಉತ್ಸವ ಮುಗಿದ ಕೂಡಲೇ ತುಳು ಅಧಿಕೃತ ಹಾಗೂ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ತುಳು ಸಂಘಟನೆಗಳನ್ನು ಒಟ್ಟು ಸೇರಿಸಿ ಮಹತ್ತರವಾದ ನಿರ್ಣಯವನ್ನು ತೆಗೆದು ಕೊಳ್ಳುವ ಹಾಗೆ ಸಚಿವರಾದ ಸುನೀಲ್ ಕುಮಾರ್ ಅವರಲ್ಲಿ ಮಾತನಾಡಿ, ಅವರು ಸಿಗುವ ದಿನಾಂಕವನ್ನು ನಿಗದಿ ಪಡಿಸಿ ತುರ್ತು ಮೀಟಿಂಗನ್ನು ಮಾಡುವ ಬಗೆ ಭರವಸೆ ನೀಡಿದರು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಂಗಳೂರಿನಲ್ಲಿ ತುಳುಲಿಪಿ ಬೋರ್ಡು ಹಾಕುವ ಬಗ್ಗೆ ಯಾರು ಅಡ್ಡಿ ಮಾಡುವುದಿಲ್ಲ. ಬಸ್ಸಿಗೆ ಬೇಕಾದವರು ಹಾಕ ಬಹುದು. ನನ್ನ ಕಛೇರಿಯಲ್ಲಿ ಕೂಡ ತುಳುಲಿಪಿ ಬೋರ್ಡ್ ಇದೆ ಎಂದು ಹೇಳಿ ಹೋರಾಟಗಾರರನ್ನು ಸಮದಾನ ಮಾಡಿದರು.

ಈ ಹೊತ್ತಿಗೆ ಇವರ ಜೊತೆ ರಾಜಕಾರಣಿ ಸಂತೋಷ್ ಕುಮಾರ್ ಬೋಳಿಯಾರ್ ಹಾಗೂ ಕಾರ್ಪೊರೇಟರ್ ಜಗದೀಶ್ ಅವರು ಭಾಗಿಯಾಗಿದ್ದರು.

ಅದಾದ ಮೇಲೆ ತುಳು ಸಂರಕ್ಷಣಾ ಸಮಿತಿಯವರು ”ಒರಿಪುಲೆ ಒರಿಪುಲೆ ತುಳು ಭಾಷೆ ಒರಿಪುಲೆ” ಘೋಷಣೆ ಕೂಗಿ ಬಸ್ಸಿಗೆ ತುಳು ಲಿಪಿ ಚಾರ್ಟ್ ಅಂಟಿಸಿದರು.

ಇದನ್ನೂ ಓದಿ: ಐಸಿಸಿ ಕಿವುಡರ ಟಿ20 ಟ್ರೋಫಿ : ಭಾರತ ತಂಡದಲ್ಲಿ ಸ್ಥಾನ ಪಡೆದ ಕುಂದಾಪುರದ ಪೃಥ್ವಿರಾಜ್‌ ಶೆಟ್ಟಿ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago