ಬೆಂಗಳೂರು: “ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು” ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಒತ್ತಾಯಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ತುಳು ನಾಡಿನ ಒಂದು ಕೋಟಿಗೂ ಹೆಚ್ಚು ಜನರು ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತುಳು ಭಾಷೆಯನ್ನು ಮಾನ್ಯತೆ ನೀಡಲು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.
“ತುಳು ನಾಡಿನಲ್ಲಿ ಕೊಂಕಣಿ, ಕ್ರೈಸ್ತ ಭಾಷೆ ಉರ್ದು ಮೊದಲಾದ ಭಾಷೆ ಮಾತನಾಡುವವರಿದ್ದಾರೆ. ಆದರೆ ಅವರೆಲ್ಲರೂ ತುಳು ನಾಡಿಗರು, ಅವರು ತುಳುವರು ಅವರೆಲ್ಲರಿಗೂ ತುಳು ಬರುತ್ತದೆ. ತುಳು ನಾಡಿನ ಜನಪದ ಕ್ರೀಡೆ ಕಂಬಳದಂತವು ವಿಶ್ವವಿಖ್ಯಾತಿಯನ್ನು ಹೊಂದಿದೆ. ಇಂತಹ ತುಳು ನಾಡಿದ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಮೊದಲು ಈ ಒತ್ತಾಯ ಅಂಗೀಕಾರವಾಗಬೇಕು. ಹಾಗೂ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಹೇಳಿದರು.
ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಅಂಗೀಕಾರ ಮಾಡಬೇಕು ಎಂದು ಹೇಳಿದ ಅವರು ಮಾತಿನ ಅಂತ್ಯದಲ್ಲಿ ಎಲ್ಲರಿಗೂ ನಮಸ್ಕಾರ (ಮಾತೆರೆಗ್ಲಾ ನಮಸ್ಕಾರ) ಎಂದು ತುಳು ಬಾಷೆಯಲ್ಲಿ ಹೇಳಿದರು.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…