ಬೆಂಗಳೂರು : ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿ.ಟಿ.ರವಿ ಅವರು ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕೆಂದು ಅಲ್ಲಿನ ಜನ, ಜನಪ್ರತಿನಿಧಿಗಳ ಮನವಿ. ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ನಾನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅವರಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ. ತುಳುವನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ” ಎಂದು ಹೇಳಿದ್ದಾರೆ.
ಹಾಗೆಯೇ ಈ ಟ್ವೀಟ್ನಲ್ಲಿ ಮನವಿಯ ಪ್ರತಿಯನ್ನು ಕೂಡಾ ಲಗತ್ತಿಸಿದ್ದಾರೆ.
ಈ ಮನವಿ ಪತ್ರದಲ್ಲಿ ಕನ್ನಡದ ಸಹೋದರ ಭಾಷೆಯಲ್ಲಿ ಒಂದಾದ ತುಳು ಭಾಷೆಯನ್ನು ಉಳಿಸಿ ಬೆಳೆಸಲು ತುಳುನಾಡಿಗರು ಅಭಿಮಾನದಿಂದ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅಗತ್ಯವಿರುವ ನೆರವು ನೀಡುವುದು ಹಿರಿಯಣ್ಣನ ಆದ್ಯ ಕರ್ತವ್ಯ ಎಂದು ಬರೆಯಲಾಗಿದೆ.
ಹಾಗೆಯೇ ಕೊನೆಯಲ್ಲಿ ಭಾರತ್ ಮಾತಾ ಕಿಜೈ, ಜೈ ಕನ್ನಡಾಂಬೆ, ತುಳು ನಾಡಿಗರ ಹೋರಾಟಕ್ಕೆ ಜಯವಾಗಲಿ ಎಂದು ಉಲ್ಲೇಖಿಸಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…