ಬೆಂಗಳೂರು : ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿ.ಟಿ.ರವಿ ಅವರು ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕೆಂದು ಅಲ್ಲಿನ ಜನ, ಜನಪ್ರತಿನಿಧಿಗಳ ಮನವಿ. ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ನಾನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅವರಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ. ತುಳುವನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ” ಎಂದು ಹೇಳಿದ್ದಾರೆ.
ಹಾಗೆಯೇ ಈ ಟ್ವೀಟ್ನಲ್ಲಿ ಮನವಿಯ ಪ್ರತಿಯನ್ನು ಕೂಡಾ ಲಗತ್ತಿಸಿದ್ದಾರೆ.
ಈ ಮನವಿ ಪತ್ರದಲ್ಲಿ ಕನ್ನಡದ ಸಹೋದರ ಭಾಷೆಯಲ್ಲಿ ಒಂದಾದ ತುಳು ಭಾಷೆಯನ್ನು ಉಳಿಸಿ ಬೆಳೆಸಲು ತುಳುನಾಡಿಗರು ಅಭಿಮಾನದಿಂದ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅಗತ್ಯವಿರುವ ನೆರವು ನೀಡುವುದು ಹಿರಿಯಣ್ಣನ ಆದ್ಯ ಕರ್ತವ್ಯ ಎಂದು ಬರೆಯಲಾಗಿದೆ.
ಹಾಗೆಯೇ ಕೊನೆಯಲ್ಲಿ ಭಾರತ್ ಮಾತಾ ಕಿಜೈ, ಜೈ ಕನ್ನಡಾಂಬೆ, ತುಳು ನಾಡಿಗರ ಹೋರಾಟಕ್ಕೆ ಜಯವಾಗಲಿ ಎಂದು ಉಲ್ಲೇಖಿಸಲಾಗಿದೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…