Featured

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ – vishwanews24

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ? ಎಂದು ಪ್ರಶ್ನೆ ಮಾಡಿದರು ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲಾ ಕ್ರಮ ಕೈಗೊಂಡಿದೆ ಎಂದು ಕೇಳಿದರು.

ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಯ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಎಂಟನೇ ಪರಿಚ್ಛೇದದ ಅಡಿಯಲ್ಲಿ ಹೆಚ್ಚಿನ ಭಾಷೆಗಳ ಸೇರ್ಪಡೆಗಾಗಿ ವಿನಂತಿಗಳನ್ನು ಪರಿಗಣಿಸಲು ಯಾವೆಲ್ಲಾ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ ? ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ತುಳು ಸೇರಿದಂತೆ ಇನ್ನಿತರ ಹಲವಾರು ಭಾಷೆಗಳು ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಕಾಲಕಾಲಕ್ಕೆ ಬೇಡಿಕೆಗಳು ಬರುತ್ತಿವೆ, ಯಾವುದೇ ಭಾಷೆಯನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಯಾವುದೇ ಸ್ಥಿರ ಮಾನದಂಡಗಳಿಲ್ಲ, ಉಪಭಾಷೆಗಳು ಮತ್ತು ಭಾಷೆಗಳ ವಿಕಸನವು ಕ್ರಿಯಾತ್ಮಕ ಪ್ರಕ್ರಿಯೆಯಾಗಿದ್ದು ಇದರ ಅಭಿವೃದ್ಧಿಯು ಸಾಮಾಜಿಕ – ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುತ್ತದೆ.

ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಲು ಭಾಷೆಗಳಿಗೆ ಯಾವುದೇ ಮಾನದಂಡವನ್ನು ನಿಗದಿಪಡಿಸುವುದು ಕಷ್ಟಕರವಾಗಿದೆ. ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಗಳ ಮೂಲಕ ಇಂತಹ ನಿಶ್ಚಿತ ಮಾನದಂಡಗಳನ್ನು ವಿಕಸನಗೊಳಿಸಲು ಹಿಂದಿನ ಪ್ರಯತ್ನಗಳು ಅನಿರ್ದಿಷ್ಟವಾಗಿವೆ,
ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಭಾವನೆಗಳು ಮತ್ತು ಅವಶ್ಯಕತೆಗಳ ಬಗ್ಗೆ ಸರ್ಕಾರವು ಜಾಗೃತವಾಗಿದೆ ಎಂದು ಸಚಿವರು ಲಿಖಿತ ಉತ್ತರವನ್ನು ಸಲ್ಲಿಸಿದರು

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

4 hours ago