ಉಡುಪಿ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸುವ ತುಳುನಾಡಿಗರ ಪುನರ್ ಹೋರಾಟಕ್ಕೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಬೆಂಬಲ ಘೋಷಿಸಿದ್ದಾರೆ.
ತುಳು ಹೋರಾಟಕ್ಕೆ ಬೆಂಬಲವನ್ನು ಘೋಷಿಸಿ ಅಣ್ಣಾಮಲೈ ಭಾನುವಾರ ರಾತ್ರಿ ಸುಮಾರು 11:58ಕ್ಕೆ ಟ್ವಿಟ್ ಮಾಡಿದ್ದು, ಈವರೆಗೆ 1200ಕ್ಕೂ ಅಧಿಕ ಮಂದಿ ಈ ಟ್ವಿಟ್ನ್ನು ಲೈಕ್ ಮಾಡಿದ್ದರೆ 250ಕ್ಕೂ ಅಧಿಕ ಮಂದಿ ಅದನ್ನು ಮರು ಟ್ವಿಟ್ ಮಾಡಿದ್ದಾರೆ.
ತುಳು ಭಾಷೆ ಅಗಾಧ ಇತಿಹಾಸ ಮತ್ತು ಸಂಪ್ರದಾಯದೊಂದಿಗೆ ವಿಕಸನಗೊಂಡ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ಇಂತಹ ತುಳುನಾಡಿನಲ್ಲಿ ಸೇವೆ ಸಲ್ಲಿಸುವ ಗೌರವ ನನ್ನ ಪಾಲಿಗೆ ಒದಗಿರುವುದು ನನ್ನ ಭಾಗ್ಯ. ನಾನು ತುಳು ಭಾಷೆ ಹಾಗೂ ಅದರ ಮಹಾಕಾವ್ಯಗಳು ಮತ್ತು ಸಿರಿ ಮತ್ತು ಕೋಟಿ ಚೆನ್ನಯ್ಯರ ಸಿರಿವಂತಿಕೆಯನ್ನು ನಾನು ಚೆನ್ನಾಗಿ ಅರಿತಿರುತ್ತೇನೆ. ಸಂವಿಧಾನದ 8ನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳ್ಳಲು ತುಳು ಭಾಷೆ ಸಂಪೂರ್ಣ ಅರ್ಹವಾಗಿದೆ’ ಎಂದವರು ಟ್ವಿಟ್ನಲ್ಲಿ ಬರೆದುಕೊಂಡಿದ್ದಾರೆ.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…