ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್ – Vishwanews24
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿಸುವ ಕೆಲಸ 95% ಮುಗಿದಿದೆ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು : ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್ – Vishwanews24
ಅವರು ಮಂಗಳೂರಿನ “ತುಳು ಭವನ”ದಲ್ಲಿ ನಡೆದ “ತುಳು ಸಂವಾದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕು ಎನ್ನುವುದು ಎಂಬುದು ನಮ್ಮೆಲ್ಲರ ಒಕ್ಕೊರಲ ಬೇಡಿಕೆ. ಆ ನಿಟ್ಟಿನಲ್ಲಿ ಶಾಸಕನಾದ ದಿನದಿಂದಲೂ ಕಾರ್ಯ ವ್ಯಾಪ್ತಿಯಲ್ಲಿ ಪ್ರಯತ್ನಿಸುತ್ತಿದ್ದೇನೆ. ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಹೇಗೆ ಅಧಿಕೃತ ಭಾಷೆಯನ್ನಾಗಿ ಮಾಡಿದ್ದಾರೆ ಎಂಬ ವರದಿ ಈಗಾಗಲೇ ಸರಕಾರದ ಮುಂದಿದೆ. ಈ ನಿಟ್ಟಿನಲ್ಲಿ 95% ಕೆಲಸಗಳು ಪೂರ್ಣಗೊಂಡಿದ್ದು, 5% ಕೆಲಸಗಳಷ್ಟೇ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುದು ನಮ್ಮೆಲ್ಲರ ಆಶಯವಾಗಿದೆ. ಅನೇಕ ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಮತ್ತೆ ಆಗ್ರಹಿಸುತ್ತೇನೆ ಎಂದರು.
