ಮಂಗಳೂರು : ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.
ಅವರು ಮಂಗಳೂರಿನ “ತುಳು ಭವನ”ದಲ್ಲಿ ನಡೆದ “ತುಳು ಸಂವಾದ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕು ಎನ್ನುವುದು ಎಂಬುದು ನಮ್ಮೆಲ್ಲರ ಒಕ್ಕೊರಲ ಬೇಡಿಕೆ. ಆ ನಿಟ್ಟಿನಲ್ಲಿ ಶಾಸಕನಾದ ದಿನದಿಂದಲೂ ಕಾರ್ಯ ವ್ಯಾಪ್ತಿಯಲ್ಲಿ ಪ್ರಯತ್ನಿಸುತ್ತಿದ್ದೇನೆ. ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಹೇಗೆ ಅಧಿಕೃತ ಭಾಷೆಯನ್ನಾಗಿ ಮಾಡಿದ್ದಾರೆ ಎಂಬ ವರದಿ ಈಗಾಗಲೇ ಸರಕಾರದ ಮುಂದಿದೆ. ಈ ನಿಟ್ಟಿನಲ್ಲಿ 95% ಕೆಲಸಗಳು ಪೂರ್ಣಗೊಂಡಿದ್ದು, 5% ಕೆಲಸಗಳಷ್ಟೇ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುದು ನಮ್ಮೆಲ್ಲರ ಆಶಯವಾಗಿದೆ. ಅನೇಕ ವರ್ಷಗಳಿಂದ ನಡೆಯುತ್ತಿರುವ ಈ ಹೋರಾಟಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಸ್ಪಂದಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಮತ್ತೆ ಆಗ್ರಹಿಸುತ್ತೇನೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…