Featured

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ : ಸಚಿವ ಅರವಿಂದ ಲಿಂಬಾವಳಿ -Vishwanews24

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಸಚಿವ ಅರವಿಂದ ಲಿಂಬಾವಳಿ -Vishwanews24

ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು.

ಭಾಭಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅಲ್ಲದೆ ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರೆ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಕೊಡುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದ ಎಲ್ಲ ತಜ್ಞರಿಗೂ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ.

ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದಿರುವ ಅವರು

ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರ್ಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

10 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

23 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

1 day ago