ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಸಚಿವ ಯಶವಂತ್ ಸಿನ್ಹ -Vishwanews24
ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಸಚಿವ ಯಶವಂತ್ ಸಿನ್ಹ -Vishwanews24
ಕೋಲ್ಕತ್ತಾ: ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ಕೋಲ್ಕತ್ತಾದಲ್ಲಿ ಶನಿವಾರ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಸಿನ್ಹ ಅವರ ತೃಣಮೂಲ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
Kolkata: Former BJP leader Yashwant Sinha joins Trinamool Congress, ahead of West Bengal Assembly elections pic.twitter.com/K3s9TQNPlS
— ANI (@ANI) March 13, 2021
ಕೆಲ ವರ್ಷಗಳ ಹಿಂದೆ ಬಿಜೆಪಿಯನ್ನು ತೊರೆದಿದ್ದ ಸಿನ್ಹ 2020ರ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ರಾಜಕೀಯ ಪಕ್ಷವೊಂದನ್ನು ಆರಂಭಿಸಿದ್ದರು.
ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಯಶವಂತ್ ಸಿನ್ಹ ಅವರು, ಅಟಲ್ ಬಿಹಾರಿ ವಾಜಪೇಯಿಯವರ ಕಾಲದಲ್ಲಿ ಬಿಜೆಪಿಯಲ್ಲಿ ಸಹಮತಕ್ಕೆ ಬೆಲೆ ನೀಡುತ್ತಿದ್ದರು. ಆದರೆ ಇಂದಿನ ಬಿಜೆಪಿ ಸರ್ಕಾರದಲ್ಲಿ ಇನ್ನೊಬ್ಬರನ್ನು ತುಳಿದು ಮೇಲೆ ಬರುವುದರ ಮೇಲೆ ನಂಬಿಕೆಯಿಟ್ಟಿದ್ದಾರೆ. ಅಕಾಲಿ ದಳ, ಬಿಜೆಡಿಯವರು ಬಿಜೆಪಿ ತೊರೆದಿದ್ದಾರೆ. ಇಂದು ಯಾರು ಬಿಜೆಪಿಯೊಟ್ಟಿಗೆ ಇದ್ದಾರೆ ಹೇಳಿ, ಬಿಜೆಪಿಯ ನೀತಿ, ಆಡಳಿತ ಯಾರಿಗೂ ಇಷ್ಟವಾಗುತ್ತಿಲ್ಲ ಎಂದರು.
ಇಂದು ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಎಲ್ಲಾ ಸಂಸ್ಥೆಗಳು ದೇಶದಲ್ಲಿ ದುರ್ಬಲಗೊಳ್ಳುತ್ತಿವೆ. ಹಿಂದೆಂದೂ ಕಂಡರಿಯದ ಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
