ಕೋಲ್ಕತ್ತಾ: ಬಿಜೆಪಿಯ ಮಾಜಿ ನಾಯಕ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹ ಕೋಲ್ಕತ್ತಾದಲ್ಲಿ ಶನಿವಾರ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಸಂದರ್ಭದಲ್ಲಿ ಸಿನ್ಹ ಅವರ ತೃಣಮೂಲ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕೆಲ ವರ್ಷಗಳ ಹಿಂದೆ ಬಿಜೆಪಿಯನ್ನು ತೊರೆದಿದ್ದ ಸಿನ್ಹ 2020ರ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ರಾಜಕೀಯ ಪಕ್ಷವೊಂದನ್ನು ಆರಂಭಿಸಿದ್ದರು.
ತೃಣಮೂಲ ಕಾಂಗ್ರೆಸ್ ಸೇರ್ಪಡೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಯಶವಂತ್ ಸಿನ್ಹ ಅವರು, ಅಟಲ್ ಬಿಹಾರಿ ವಾಜಪೇಯಿಯವರ ಕಾಲದಲ್ಲಿ ಬಿಜೆಪಿಯಲ್ಲಿ ಸಹಮತಕ್ಕೆ ಬೆಲೆ ನೀಡುತ್ತಿದ್ದರು. ಆದರೆ ಇಂದಿನ ಬಿಜೆಪಿ ಸರ್ಕಾರದಲ್ಲಿ ಇನ್ನೊಬ್ಬರನ್ನು ತುಳಿದು ಮೇಲೆ ಬರುವುದರ ಮೇಲೆ ನಂಬಿಕೆಯಿಟ್ಟಿದ್ದಾರೆ. ಅಕಾಲಿ ದಳ, ಬಿಜೆಡಿಯವರು ಬಿಜೆಪಿ ತೊರೆದಿದ್ದಾರೆ. ಇಂದು ಯಾರು ಬಿಜೆಪಿಯೊಟ್ಟಿಗೆ ಇದ್ದಾರೆ ಹೇಳಿ, ಬಿಜೆಪಿಯ ನೀತಿ, ಆಡಳಿತ ಯಾರಿಗೂ ಇಷ್ಟವಾಗುತ್ತಿಲ್ಲ ಎಂದರು.
ಇಂದು ನ್ಯಾಯಾಂಗ ಸೇರಿದಂತೆ ಪ್ರಜಾಪ್ರಭುತ್ವದ ಎಲ್ಲಾ ಸಂಸ್ಥೆಗಳು ದೇಶದಲ್ಲಿ ದುರ್ಬಲಗೊಳ್ಳುತ್ತಿವೆ. ಹಿಂದೆಂದೂ ಕಂಡರಿಯದ ಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…