ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೋದಿಯವರನ್ನು ಸೋಲಿಸಲು ತೃತೀಯ ರಂಗ ಒಂದಾಗಿದೆ ಎಂದು ಬಳ್ಳಾರಿ ಶಾಸಕ ಬಿ. ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಬಹಳಷ್ಟು ಮಾಜಿ ಮುಖ್ಯಮಂತ್ರಿಗಳು, ಮಂತ್ರಿಗಳು, ತೃತೀಯ ರಂಗದ ನಾಯಕರು ಕಾರ್ಯಕ್ರದಲ್ಲಿ ಭಾಗಿಯಾಗಿದ್ದಾರೆ. ತೃತೀಯ ರಂಗದ ಒಗ್ಗಟ್ಟು ಕಾಂಗ್ರೆಸ್ ಪತನದ ಮೊದಲು ಮೆಟ್ಟಿಲಾಗಿದೆ. ಈ ತೃತೀಯ ರಂಗದ ಒಗ್ಗಟ್ಟೂ ಮಳೆಗಾಲದ ಅಣಬೆಗಳು ಇದ್ದಂತೆ ಲೇವಡಿ ಮಾಡಿದರು.
ಮೋದಿಯವರನ್ನು ಸೋಲಿಸಲು ತೃತೀಯ ರಂಗ ಒಂದಾಗಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ತೃತೀಯ ರಂಗ ಅಣಬೆ ತರಹ ಹುಟ್ಟಿಕೊಳ್ಳುತ್ತವೆ. ಅದೇ ರೀತಿ ಚುನಾವಣೆ ಮುಗಿದ ನಂತರ ಅವು ಯಾವುದು ಇರಲ್ಲ. ಯಾವುದೇ ಇತಿಹಾಸವನ್ನು ತೆಗೆದು ನೋಡಿದರೂ ತೃತಿಯ ರಂಗ ಉಳಿದಿರುವುದಿಲ್ಲ ಅದನ್ನು ನಾವು ನೋಡಬಹುದು. ಚುನಾವಣೆ ಮುಗಿದ ನಂತರ ಒಬ್ಬೊಬ್ಬರು ಒಂದೊಂದು ದಿಕ್ಕಿಗೆ ಹೋಗಿರುತ್ತಾರೆ. ಈ ತೃತಿಯ ರಂಗಕ್ಕೆ ಆಯಸ್ಸು ಇರಲ್ಲ ಎಂದು ಅಭಿಪ್ರಾಯಪಟ್ಟರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾದ ನಂತರ ಯೂ ಟರ್ನ್ ಹೊಡೆಯುತ್ತಿದ್ದಾರೆ. ರೈತರ ಸಾಲ ಮಾಡಲೇಬೇಕು ಆದರೆ ಸಾಲ ಮನ್ನಾ ಮಾಡೋದಿಲ್ಲ ಅಂತಾ ಹೇಳುತ್ತಿದ್ದಾರೆ. ಬಹುಮತ ಸಾಬೀತು ಪಡಿಸುವ ದಿನದಂದು ಭಾಗಿಯಾಗುವ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಂತೆ ಕೇಳುತ್ತೇವೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…