ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೋದಿಯವರನ್ನು ಸೋಲಿಸಲು ತೃತೀಯ ರಂಗ ಒಂದಾಗಿದೆ ಎಂದು ಬಳ್ಳಾರಿ ಶಾಸಕ ಬಿ. ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಬಹಳಷ್ಟು ಮಾಜಿ ಮುಖ್ಯಮಂತ್ರಿಗಳು, ಮಂತ್ರಿಗಳು, ತೃತೀಯ ರಂಗದ ನಾಯಕರು ಕಾರ್ಯಕ್ರದಲ್ಲಿ ಭಾಗಿಯಾಗಿದ್ದಾರೆ. ತೃತೀಯ ರಂಗದ ಒಗ್ಗಟ್ಟು ಕಾಂಗ್ರೆಸ್ ಪತನದ ಮೊದಲು ಮೆಟ್ಟಿಲಾಗಿದೆ. ಈ ತೃತೀಯ ರಂಗದ ಒಗ್ಗಟ್ಟೂ ಮಳೆಗಾಲದ ಅಣಬೆಗಳು ಇದ್ದಂತೆ ಲೇವಡಿ ಮಾಡಿದರು.
ಮೋದಿಯವರನ್ನು ಸೋಲಿಸಲು ತೃತೀಯ ರಂಗ ಒಂದಾಗಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ತೃತೀಯ ರಂಗ ಅಣಬೆ ತರಹ ಹುಟ್ಟಿಕೊಳ್ಳುತ್ತವೆ. ಅದೇ ರೀತಿ ಚುನಾವಣೆ ಮುಗಿದ ನಂತರ ಅವು ಯಾವುದು ಇರಲ್ಲ. ಯಾವುದೇ ಇತಿಹಾಸವನ್ನು ತೆಗೆದು ನೋಡಿದರೂ ತೃತಿಯ ರಂಗ ಉಳಿದಿರುವುದಿಲ್ಲ ಅದನ್ನು ನಾವು ನೋಡಬಹುದು. ಚುನಾವಣೆ ಮುಗಿದ ನಂತರ ಒಬ್ಬೊಬ್ಬರು ಒಂದೊಂದು ದಿಕ್ಕಿಗೆ ಹೋಗಿರುತ್ತಾರೆ. ಈ ತೃತಿಯ ರಂಗಕ್ಕೆ ಆಯಸ್ಸು ಇರಲ್ಲ ಎಂದು ಅಭಿಪ್ರಾಯಪಟ್ಟರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾದ ನಂತರ ಯೂ ಟರ್ನ್ ಹೊಡೆಯುತ್ತಿದ್ದಾರೆ. ರೈತರ ಸಾಲ ಮಾಡಲೇಬೇಕು ಆದರೆ ಸಾಲ ಮನ್ನಾ ಮಾಡೋದಿಲ್ಲ ಅಂತಾ ಹೇಳುತ್ತಿದ್ದಾರೆ. ಬಹುಮತ ಸಾಬೀತು ಪಡಿಸುವ ದಿನದಂದು ಭಾಗಿಯಾಗುವ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಂತೆ ಕೇಳುತ್ತೇವೆ ಎಂದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…