ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೋದಿಯವರನ್ನು ಸೋಲಿಸಲು ತೃತೀಯ ರಂಗ ಒಂದಾಗಿದೆ ಎಂದು ಬಳ್ಳಾರಿ ಶಾಸಕ ಬಿ. ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಬಹಳಷ್ಟು ಮಾಜಿ ಮುಖ್ಯಮಂತ್ರಿಗಳು, ಮಂತ್ರಿಗಳು, ತೃತೀಯ ರಂಗದ ನಾಯಕರು ಕಾರ್ಯಕ್ರದಲ್ಲಿ ಭಾಗಿಯಾಗಿದ್ದಾರೆ. ತೃತೀಯ ರಂಗದ ಒಗ್ಗಟ್ಟು ಕಾಂಗ್ರೆಸ್ ಪತನದ ಮೊದಲು ಮೆಟ್ಟಿಲಾಗಿದೆ. ಈ ತೃತೀಯ ರಂಗದ ಒಗ್ಗಟ್ಟೂ ಮಳೆಗಾಲದ ಅಣಬೆಗಳು ಇದ್ದಂತೆ ಲೇವಡಿ ಮಾಡಿದರು.
ಮೋದಿಯವರನ್ನು ಸೋಲಿಸಲು ತೃತೀಯ ರಂಗ ಒಂದಾಗಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ತೃತೀಯ ರಂಗ ಅಣಬೆ ತರಹ ಹುಟ್ಟಿಕೊಳ್ಳುತ್ತವೆ. ಅದೇ ರೀತಿ ಚುನಾವಣೆ ಮುಗಿದ ನಂತರ ಅವು ಯಾವುದು ಇರಲ್ಲ. ಯಾವುದೇ ಇತಿಹಾಸವನ್ನು ತೆಗೆದು ನೋಡಿದರೂ ತೃತಿಯ ರಂಗ ಉಳಿದಿರುವುದಿಲ್ಲ ಅದನ್ನು ನಾವು ನೋಡಬಹುದು. ಚುನಾವಣೆ ಮುಗಿದ ನಂತರ ಒಬ್ಬೊಬ್ಬರು ಒಂದೊಂದು ದಿಕ್ಕಿಗೆ ಹೋಗಿರುತ್ತಾರೆ. ಈ ತೃತಿಯ ರಂಗಕ್ಕೆ ಆಯಸ್ಸು ಇರಲ್ಲ ಎಂದು ಅಭಿಪ್ರಾಯಪಟ್ಟರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾದ ನಂತರ ಯೂ ಟರ್ನ್ ಹೊಡೆಯುತ್ತಿದ್ದಾರೆ. ರೈತರ ಸಾಲ ಮಾಡಲೇಬೇಕು ಆದರೆ ಸಾಲ ಮನ್ನಾ ಮಾಡೋದಿಲ್ಲ ಅಂತಾ ಹೇಳುತ್ತಿದ್ದಾರೆ. ಬಹುಮತ ಸಾಬೀತು ಪಡಿಸುವ ದಿನದಂದು ಭಾಗಿಯಾಗುವ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದಂತೆ ಕೇಳುತ್ತೇವೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…