ಕುಂದಾಪುರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಕೆನರಾ ಬ್ಯಾಂಕ್ ಸಮೀಪ ಆಗಸ್ಟ್ 28 ರ ಭಾನುವಾರ ಸಂಜೆ ಚಲಿಸುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಟೈರ್ ಏಕಾಏಕಿ ಸಿಡಿದಿದ್ದು , ಚಾಲಕನ ಸಮಯ ಪ್ರಜ್ಞೆದಿಂದ ಆಗಬಹುದಾದ ದೊಡ್ಡ ದುರಂತ ತಪ್ಪಿದೆ.
ಖಾಸಗಿ ಬಸ್ ಕಾರ್ಕಳದಿಂದ ಕುಂದಾಪುರಕ್ಕೆ ಸಂಚರಿಸುತ್ತಿದ್ದು ತೆಕ್ಕಟ್ಟೆ ಬಳಿ ಏಕಾಏಕಿ ಮುಂಭಾಗದ ಟೈರ್ ಒಡೆದಿದ್ದರಿಂದ ಬಸ್ ರಸ್ತೆ ವಿಭಜಕದ ಏರುವ ಸಾಧ್ಯತೆ ಇತ್ತು. ಆದರೆ ಈ ಸಂದರ್ಭ ಚಾಲಕನ ಸಮಯ ಪ್ರಜ್ಞೆಯಿಂದ ತಕ್ಷಣ ಬಸ್ಸನ್ನು ತಿರುಗಿಸಿ ರಸ್ತೆಯ ಇನ್ನೊಂದು ಬದಿಗೆ ಹೋಗದಂತೆ ತಡೆದಿದ್ದು ಇದರಿಂದ ಭಾರೀ ಅವಘಡವೊಂದು ತಪ್ಪಿದೆ.
.ಬಸ್ಸಿನಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿದ್ದು, ಯಾರಿಗೂ ಗಾಯಗಳಾಗಿಲ್ಲ. ತಕ್ಷಣವೇ ಅವರಿಗೆ ಪರ್ಯಾಯ ಬಸ್ ಒದಗಿಸಲಾಯಿತು. ಬಸ್ ರಸ್ತೆ ಮಧ್ಯೆಯೇ ಕೆಲಕಾಲ ನಿಂತಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು. ಬಳಿಕ ಸ್ಥಳೀಯರ ನೆರವಿನಿಂದ ಬಸ್ಸನ್ನು ರಸ್ತೆ ಬದಿಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಹಿಜಬ್ ವಿವಾದ : ಇಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…