ಕುಂದಾಪುರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಕೆನರಾ ಬ್ಯಾಂಕ್ ಸಮೀಪ ಆಗಸ್ಟ್ 28 ರ ಭಾನುವಾರ ಸಂಜೆ ಚಲಿಸುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಟೈರ್ ಏಕಾಏಕಿ ಸಿಡಿದಿದ್ದು , ಚಾಲಕನ ಸಮಯ ಪ್ರಜ್ಞೆದಿಂದ ಆಗಬಹುದಾದ ದೊಡ್ಡ ದುರಂತ ತಪ್ಪಿದೆ.
ಖಾಸಗಿ ಬಸ್ ಕಾರ್ಕಳದಿಂದ ಕುಂದಾಪುರಕ್ಕೆ ಸಂಚರಿಸುತ್ತಿದ್ದು ತೆಕ್ಕಟ್ಟೆ ಬಳಿ ಏಕಾಏಕಿ ಮುಂಭಾಗದ ಟೈರ್ ಒಡೆದಿದ್ದರಿಂದ ಬಸ್ ರಸ್ತೆ ವಿಭಜಕದ ಏರುವ ಸಾಧ್ಯತೆ ಇತ್ತು. ಆದರೆ ಈ ಸಂದರ್ಭ ಚಾಲಕನ ಸಮಯ ಪ್ರಜ್ಞೆಯಿಂದ ತಕ್ಷಣ ಬಸ್ಸನ್ನು ತಿರುಗಿಸಿ ರಸ್ತೆಯ ಇನ್ನೊಂದು ಬದಿಗೆ ಹೋಗದಂತೆ ತಡೆದಿದ್ದು ಇದರಿಂದ ಭಾರೀ ಅವಘಡವೊಂದು ತಪ್ಪಿದೆ.
.ಬಸ್ಸಿನಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿದ್ದು, ಯಾರಿಗೂ ಗಾಯಗಳಾಗಿಲ್ಲ. ತಕ್ಷಣವೇ ಅವರಿಗೆ ಪರ್ಯಾಯ ಬಸ್ ಒದಗಿಸಲಾಯಿತು. ಬಸ್ ರಸ್ತೆ ಮಧ್ಯೆಯೇ ಕೆಲಕಾಲ ನಿಂತಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು. ಬಳಿಕ ಸ್ಥಳೀಯರ ನೆರವಿನಿಂದ ಬಸ್ಸನ್ನು ರಸ್ತೆ ಬದಿಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಹಿಜಬ್ ವಿವಾದ : ಇಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ – Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…