ಕುಂದಾಪುರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಕೆನರಾ ಬ್ಯಾಂಕ್ ಸಮೀಪ ಆಗಸ್ಟ್ 28 ರ ಭಾನುವಾರ ಸಂಜೆ ಚಲಿಸುತ್ತಿದ್ದ ಖಾಸಗಿ ಬಸ್ಸಿನ ಮುಂಭಾಗದ ಟೈರ್ ಏಕಾಏಕಿ ಸಿಡಿದಿದ್ದು , ಚಾಲಕನ ಸಮಯ ಪ್ರಜ್ಞೆದಿಂದ ಆಗಬಹುದಾದ ದೊಡ್ಡ ದುರಂತ ತಪ್ಪಿದೆ.
ಖಾಸಗಿ ಬಸ್ ಕಾರ್ಕಳದಿಂದ ಕುಂದಾಪುರಕ್ಕೆ ಸಂಚರಿಸುತ್ತಿದ್ದು ತೆಕ್ಕಟ್ಟೆ ಬಳಿ ಏಕಾಏಕಿ ಮುಂಭಾಗದ ಟೈರ್ ಒಡೆದಿದ್ದರಿಂದ ಬಸ್ ರಸ್ತೆ ವಿಭಜಕದ ಏರುವ ಸಾಧ್ಯತೆ ಇತ್ತು. ಆದರೆ ಈ ಸಂದರ್ಭ ಚಾಲಕನ ಸಮಯ ಪ್ರಜ್ಞೆಯಿಂದ ತಕ್ಷಣ ಬಸ್ಸನ್ನು ತಿರುಗಿಸಿ ರಸ್ತೆಯ ಇನ್ನೊಂದು ಬದಿಗೆ ಹೋಗದಂತೆ ತಡೆದಿದ್ದು ಇದರಿಂದ ಭಾರೀ ಅವಘಡವೊಂದು ತಪ್ಪಿದೆ.
.ಬಸ್ಸಿನಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿದ್ದು, ಯಾರಿಗೂ ಗಾಯಗಳಾಗಿಲ್ಲ. ತಕ್ಷಣವೇ ಅವರಿಗೆ ಪರ್ಯಾಯ ಬಸ್ ಒದಗಿಸಲಾಯಿತು. ಬಸ್ ರಸ್ತೆ ಮಧ್ಯೆಯೇ ಕೆಲಕಾಲ ನಿಂತಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು. ಬಳಿಕ ಸ್ಥಳೀಯರ ನೆರವಿನಿಂದ ಬಸ್ಸನ್ನು ರಸ್ತೆ ಬದಿಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಹಿಜಬ್ ವಿವಾದ : ಇಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…