ಉಡುಪಿ: ಕರಾವಳಿ ಭಾಗದಲ್ಲಿ ಕಡಲ್ಕೊರೆತ ತಪ್ಪಿಸಲು ಕಲ್ಲು ಹಾಕುವ ಕಾರ್ಯ ಅಲ್ಲಲ್ಲಿ ನಡೆಯುತ್ತಿರುವ ಕಾರಣ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಲ್ಲುಗಳ ಸಾಗಾಟ ನಡೆಯುತ್ತಿದ್ದು ಗುಜರಿ ಟಿಪ್ಪರ್ಗಳು ಅಪಾಯಕಾರಿಯಾಗಿದ್ದು ಇವುಗಳಿಗೆ ಬ್ರೇಕ್ ಹಾಕಲು ಒತ್ತಾಯ ಕೇಳಿ ಬರುತ್ತಿದೆ.
ಕಳೆದ ಹಲಾವಾರು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಯಮಧೂತರಂತೆ ತೆರೆದ ಟಿಪ್ಪರ್ ವಾಹನಗಳಲ್ಲಿ ಕಲ್ಲುಬಂಡೆಗಳ ಸಾಗಾಟ ಹೆಚ್ಚಾಗುತ್ತಿದ್ದು ಯಾವುದೇ ಮುಜಾಗ್ರತೆ ಕ್ರಮ ಕೈಗೊಳ್ಳದೆ ಈ ರೀತಿ ಸಾಗುತ್ತಿರುವುದು ಘನವಾಹನಗಳ ಹಿಂಬದಿ ಸವಾರರಿಗೆ ಪ್ರಾಣ ಸಂಕಟ ಎದುರಾಗಿದೆ. ಈ ವಾಹನಗಳ ನಿಯಮಿತ ವೇಗದಲ್ಲಿ ಸಾಗದೇ ಅತ್ಯಂತ ರಭಸದಲ್ಲಿ ಚಲಿಸುವುದರಿಂದ ಹೊತ್ತೋಯ್ದ ಬಂಡೆಕಲ್ಲುಗಳು ಈಗ ಬೀಳುತ್ತೆ ಮತ್ತೆ ಬೀಳುತ್ತೆ ಅನ್ನುನ ಸ್ಥಿತಿ ಎದುರಾಗಿದೆ.
ಅಧಿಕಾರಿಗಳು ಮೌನ: ದ್ವಿಚಕ್ರ ವಾಹನದ ಸವಾರ, ಹಿಂಬದಿ ಸವಾರರಿಗೆ ಹೆಲ್ಮೆಟ್ ಇಲ್ಲ ಎಂದು ತಲೆ ತಿಂದು ಕೇಸು ಜಡಿಯುವ, ರಿಕ್ಷಾ ಚಾಲಕರಿಗೆ ಖಾಕಿ ಇಲ್ಲ, ಟ್ಯಾಕ್ಸಿ ಚಾಲಕರಿಗೆ ಬಿಳಿ ಇಲ್ಲ ಎಂದು ರಸ್ತೆಗಳಲ್ಲಿ ಅಡ್ಡ ಹಾಕುವ ಸಾರಿಗೆ ಆಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಈ ಅಪಾಯಕಾರಿ ಬಂಡೆ ಹೊರುವ ಗುಜರಿ ಟಿಪ್ಪರ್ಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇರುವುದು ಅವರಿವರ ನಡುವೆ ಹೊಂದಾಣಿಕೆಯ ಸಂಶಯ ಮೂಡಿಸಿದೆ. ಎನಿದ್ದರೂ ಘನಘೋರ ಅವಘಡ ನಡೆಯದೆ ನಮ್ಮ ಅಧಿಕಾರಿಗಳು ಕ್ರಮ ಕೈಗೊಳ್ಳಲಾರರು ಎನ್ನುವುದು ನಾಗರಿಕರು ಮಾತಾಡುತ್ತಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…