ಮಂಗಳೂರು : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದೇನೆ ಮತ್ತು ಇನ್ನೂ ಕೆಲವು ಜಮೀನುಗಳ ವಿಚಾರಗಳು ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದೆ ಆದಷ್ಟೂ ಬೇಗನೆ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಹಾಗೂ ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…