ಮಂಗಳೂರು : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದೇನೆ ಮತ್ತು ಇನ್ನೂ ಕೆಲವು ಜಮೀನುಗಳ ವಿಚಾರಗಳು ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದೆ ಆದಷ್ಟೂ ಬೇಗನೆ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಹಾಗೂ ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…