ಬೆಂಗಳೂರು: ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಬಿದ್ದಿದೆ.
ತೆರಿಗೆ ಕಟ್ಟದ ಆರೋಪ ಎದುರಿಸುತ್ತಿರುವ ನಗರದ ಪ್ರತಿಷ್ಠಿತ ಮಂತ್ರಿಮಾಲ್ಗೆ ಮತ್ತೆ ಬಿಬಿಎಂಪಿ ಬೀಗ ಜಡಿದಿದೆ. 27 ಕೋಟಿ ರೂಪಾಯಿ ತೆರಿಗೆಯನ್ನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ಅಧಿಕಾರಿಗಳಿಂದ ಮಂತ್ರಿಮಾಲ್ಗೆ ಬೀಗ ಹಾಕಿದ್ದಾರೆ.
ಳೆದ 3 ವರ್ಷಗಳಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 34.49 ಕೋಟಿ ರೂ. ತೆರಿಗೆಯನ್ನು ಪಾವತಿಸಿಲ್ಲ. ಪದೇ ಪದೇ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿದ ಕಾರಣ ಬಿಬಿಎಂಪಿ ಅಧಿಕಾರಿಗಳು ಮತ್ತೊಮ್ಮೆ ಮಾಲ್ಗೆ ಬೀಗ ಹಾಕಿ ಶಾಕ್ ನೀಡಿದ್ದಾರೆ. ತೆರಿಗೆ ಬಾಕಿ ಹಿನ್ನೆಲೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿದ್ದರು.
ಆದರೆ, ನವೆಂಬರ್ ಅಂತ್ಯದೊಳಗೆ ತೆರಿಗೆ ಪಾವತಿಸುವುದಾಗಿ ಮಂತ್ರಿ ಮಾಲ್ ಆಡಳಿತ ಮಂಡಳಿ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರಿಂದ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಗಡುವು ಮೀರಿದ್ದರಿಂದ ಸೋಮವಾರ ಮತ್ತೆ ಬಿಬಿಎಂಪಿ ಅಧಿಕಾರಿಗಳು ಮಾಲ್ಗೆ ಬೀಗ ಜಡಿದಿದ್ದಾರೆ.
ನವೆಂಬರ್ 15ಕ್ಕೂ ಮುಂಚೆ ಅಕ್ಟೋಬರ್ 1ರಂದು ಕೂಡ ಮಂತ್ರಿ ಮಾಲ್ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದರು. ಆಗ ಒಟ್ಟು ತೆರಿಗೆಯಲ್ಲಿ 5 ಕೋಟಿ ರೂ, ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ನವೆಂಬರ್ 15ಕ್ಕೆ ಬೀಗ ಹಾಕಲಾಗಿತ್ತು.
ಮಂತ್ರಿ ಮಾಲ್ ಆಡಳಿತ ಮಂಡಳಿ 2018-19ರಲ್ಲಿ 12.47 ಕೋಟಿ ರೂ., 2019-20ರಲ್ಲಿ 10.84 ಕೋಟಿ ರೂ., 2020-21ರಲ್ಲಿ 9.21 ಕೋಟಿ ರೂ. ಹಾಗೂ 2021-22ರಲ್ಲಿ 6.95 ಕೋಟಿ ರೂ. ಸೇರಿ ಒಟ್ಟು 39.49 ಕೋಟಿ ಆಸ್ತಿ ತೆರಿಗೆ ಪಾವತಿಸಬೇಕಿತ್ತು. ಇದರಲ್ಲಿ ಆಸ್ತಿ ತೆರಿಗೆ ಮೊತ್ತ 27.22 ಕೋಟಿ ರೂ.ಗಳಾಗಿದ್ದು, ಬಡ್ಡಿ 12.26 ಕೋಟಿ ರೂ.ಗಳಾಗಿದೆ. ಇದರಲ್ಲಿ 5 ಕೋಟಿ ರೂ.ಗಳನ್ನು ಅಕ್ಟೋಬರ್ನಲ್ಲಿ ಪಾವತಿ ಮಾಡಿದ್ದರು.
2018–19ನೇ ಸಾಲಿನಲ್ಲಿ 10.43 ಕೋಟಿ ರೂ. ಆಸ್ತಿ ತೆರಿಗೆ ಪಾವತಿಗಾಗಿ ಕಟ್ಟಡದ ಮಾಲೀಕರು ಚೆಕ್ ನೀಡಿದ್ದರು. ಅವರ ಬ್ಯಾಂಕ್ ಖಾತೆಯಲ್ಲಿ ಸಾಕಷ್ಟು ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಬಿಬಿಎಂಪಿಯು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ.
ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ…
ಕೌಟುಂಬಿಕ ಕಲಹ : ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್ಪೆಕ್ಟರ್ …
ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ…
ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು ಆಯ್ಕೆ ಉಡುಪಿ: ಕರ್ನಾಟಕ ಲಲಿತಕಲಾ…
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…