Featured

ತೆರಿಗೆ ಬಾಕಿ ವಿವಾದ ; ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ – Vishwanews24

ತೆರಿಗೆ ಬಾಕಿ ವಿವಾದ ; ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ – Vishwanews24

ಕಳೆದ ಮೂರು ವರ್ಷಗಳಿಂದ ಸುಮಾರು 29 ಕೋಟಿ ರೂ. ತೆರಿಗೆ ಬಾಕಿ..

ಬೆಂಗಳೂರು: ತೆರಿಗೆ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಬಿದ್ದಿದೆ.

ತೆರಿಗೆ ಕಟ್ಟದ ಆರೋಪ ಎದುರಿಸುತ್ತಿರುವ ನಗರದ ಪ್ರತಿಷ್ಠಿತ ಮಂತ್ರಿಮಾಲ್​ಗೆ ಮತ್ತೆ ಬಿಬಿಎಂಪಿ ಬೀಗ ಜಡಿದಿದೆ. 27 ಕೋಟಿ ರೂಪಾಯಿ ತೆರಿಗೆಯನ್ನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ಅಧಿಕಾರಿಗಳಿಂದ ಮಂತ್ರಿಮಾಲ್​ಗೆ ಬೀಗ ಹಾಕಿದ್ದಾರೆ.

ಳೆದ 3 ವರ್ಷಗಳಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 34.49 ಕೋಟಿ ರೂ. ತೆರಿಗೆಯನ್ನು ಪಾವತಿಸಿಲ್ಲ. ಪದೇ ಪದೇ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿದ ಕಾರಣ ಬಿಬಿಎಂಪಿ ಅಧಿಕಾರಿಗಳು ಮತ್ತೊಮ್ಮೆ ಮಾಲ್‌ಗೆ ಬೀಗ ಹಾಕಿ ಶಾಕ್‌ ನೀಡಿದ್ದಾರೆ. ತೆರಿಗೆ ಬಾಕಿ ಹಿನ್ನೆಲೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್ಗೆ ಬೀಗ ಹಾಕಿದ್ದರು.

ಆದರೆ, ನವೆಂಬರ್‌ ಅಂತ್ಯದೊಳಗೆ ತೆರಿಗೆ ಪಾವತಿಸುವುದಾಗಿ ಮಂತ್ರಿ ಮಾಲ್‌ ಆಡಳಿತ ಮಂಡಳಿ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರಿಂದ ಮತ್ತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಗಡುವು ಮೀರಿದ್ದರಿಂದ ಸೋಮವಾರ ಮತ್ತೆ ಬಿಬಿಎಂಪಿ ಅಧಿಕಾರಿಗಳು ಮಾಲ್‌ಗೆ ಬೀಗ ಜಡಿದಿದ್ದಾರೆ.

ನವೆಂಬರ್‌ 15ಕ್ಕೂ ಮುಂಚೆ ಅಕ್ಟೋಬರ್‌ 1ರಂದು ಕೂಡ ಮಂತ್ರಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದರು. ಆಗ ಒಟ್ಟು ತೆರಿಗೆಯಲ್ಲಿ 5 ಕೋಟಿ ರೂ, ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ನವೆಂಬರ್‌ 15ಕ್ಕೆ ಬೀಗ ಹಾಕಲಾಗಿತ್ತು.

ಮಂತ್ರಿ ಮಾಲ್‌ ಆಡಳಿತ ಮಂಡಳಿ 2018-19ರಲ್ಲಿ 12.47 ಕೋಟಿ ರೂ., 2019-20ರಲ್ಲಿ 10.84 ಕೋಟಿ ರೂ., 2020-21ರಲ್ಲಿ 9.21 ಕೋಟಿ ರೂ. ಹಾಗೂ 2021-22ರಲ್ಲಿ 6.95 ಕೋಟಿ ರೂ. ಸೇರಿ ಒಟ್ಟು 39.49 ಕೋಟಿ ಆಸ್ತಿ ತೆರಿಗೆ ಪಾವತಿಸಬೇಕಿತ್ತು. ಇದರಲ್ಲಿ ಆಸ್ತಿ ತೆರಿಗೆ ಮೊತ್ತ 27.22 ಕೋಟಿ ರೂ.ಗಳಾಗಿದ್ದು, ಬಡ್ಡಿ 12.26 ಕೋಟಿ ರೂ.ಗಳಾಗಿದೆ. ಇದರಲ್ಲಿ 5 ಕೋಟಿ ರೂ.ಗಳನ್ನು ಅಕ್ಟೋಬರ್‌ನಲ್ಲಿ ಪಾವತಿ ಮಾಡಿದ್ದರು.

2018–19ನೇ ಸಾಲಿನಲ್ಲಿ 10.43 ಕೋಟಿ ರೂ. ಆಸ್ತಿ ತೆರಿಗೆ ಪಾವತಿಗಾಗಿ ಕಟ್ಟಡದ ಮಾಲೀಕರು ಚೆಕ್‌ ನೀಡಿದ್ದರು. ಅವರ ಬ್ಯಾಂಕ್‌ ಖಾತೆಯಲ್ಲಿ ಸಾಕಷ್ಟು ಹಣವಿಲ್ಲದ ಕಾರಣ ಚೆಕ್‌ ಬೌನ್ಸ್‌ ಆಗಿತ್ತು. ಈ ಸಂಬಂಧ ಬಿಬಿಎಂಪಿಯು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago