ಶಿವಮೊಗ್ಗ : ಲೋಕಸಭಾ ಚುನಾವಣೆ ಪ್ರಚಾರವನ್ನು ಅದ್ಧೂರಿಯಾಗಿ ಆರಂಭಿಸಿರುವ ಬಿಜೆಪಿ ಇದೀಗ ಕರ್ನಾಟಕದಲ್ಲಿ ಎರಡನೇ ಸಮಾವೇಶ ಆಯೋಜಿಸಿದೆ. ಕಲಬುರಗಿ ಬಳಿಕ ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದಾರೆ. ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಗೆ ಆಗಮಿಸಿದರು. ಈ ವೇಳೆ ಕಾರ್ಯಕರ್ತರ ಜಯ ಘೋಷ, ಮೋದಿ ಮೋದಿ ಘೋಷಣೆ, ಬಾರತ್ ಮಾತಾ ಕಿ ಜೈಕಾರದಿಂದ ಸಭೆ ಝೇಂಕರಿಸಿತ್ತು.
ಪ್ರಧಾನಿ ಮೋದಿಯ ಬೃಹತ್ ಸಮಾವೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಘಟಾನಘಟಿ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತರಿದ್ದಾರೆ. ಇದರ ಜೊತೆಗೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್, ದಾವಣಗೆರೆ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಉಪಸ್ಥಿತಿರಿದ್ದಾರೆ. ಈ ಸಮಾವೇಶದಲ್ಲಿ ಜೆಡಿಎಸ್ ಶಾಸಕಿ ಶಾರದ ಪುರಿ ನಾಯಕ್ ಗೂ ಅವಕಾಶ ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…