Featured

ತೆಲಂಗಾಣದಲ್ಲಿ ಬಾಲಿವುಡ್ ನಟ  ಸೋನು ಸೂದ್  ದೇವಾಲಯ , ಮೂರ್ತಿ ಪ್ರತಿಷ್ಟಾಪಿಸಿ  ನಿತ್ಯವೂ ಪೂಜೆ, ಆರತಿ -Vishwanews24

ತೆಲಂಗಾಣದಲ್ಲಿ ಬಾಲಿವುಡ್ ನಟ  ಸೋನು ಸೂದ್  ದೇವಾಲಯ , ಮೂರ್ತಿ ಪ್ರತಿಷ್ಟಾಪಿಸಿ  ನಿತ್ಯವೂ ಪೂಜೆ, ಆರತಿ -Vishwanews24

ತೆಲಂಗಾಣ: ಕೊರೊನಾ ಸಾಂಕ್ರಾಮಿಕದ ಸಂಕಟ ಕಾಲದಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಜನರ ನೆರವಿಗೆ ಧಾವಿಸಿದ ನಟ ಸೋನು ಸೂದ್ ಕಾರ್ಯಗಳಿಗೆ ಇಡೀ ದೇಶಾದ್ಯಂತ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ದೇವಸ್ಥಾನವೊಂದನ್ನು ಕಟ್ಟಿ ಅದರಲ್ಲಿ ಸೋನು ಸೂದ್ ಅವರ ಮೂರ್ತಿ ಪ್ರತಿಷ್ಟಾಪಿಸಿ ಪೂಜಿಸಲಾಗುತ್ತಿದೆ.

ಬಾಲಿವುಡ್ ನಟ ಸೋನು ಸೂದ್ ಅವರ ಮಾನವೀಯ ಕಾರ್ಯವನ್ನು ಗುರುತಿಸಿದ ತೆಲಂಗಾಣದ ಸಿದ್ದಿಪೇಟ್​​ನಲ್ಲಿರುವ ದುಬ್ಬಾ ತಾಂಡಾದ ಜನರು ತೆಲಂಗಾಣದ ಸಿದ್ದಿಪೇಟೆ ಜಿಲ್ಲಾಧಿಕಾರಿಗಳ ಸಹಾಯದಿಂದ ನಟನಿಗೆ ಗೌರವಾರ್ಥವಾಗಿ ದೇವಾಲಯ ಕಟ್ಟಿದ್ದಾರೆ.

ದೇವಾಲಯದಲ್ಲಿ ಸೋನು ಸೂದ್ ವಿಗ್ರಹ ಮಾಡಿದ ಶಿಲ್ಪಿ ಮತ್ತು ಸ್ಥಳೀಯ ಜನರು, ವಿಗ್ರಹಕ್ಕೆ ಆರತಿ ಮಾಡಿ ಉದ್ಘಾಟಿಸಿದ್ದಾರೆ. ತಾಂಡಾದ ಮಹಿಳೆಯರು ತಮ್ಮ ಸಾಂಪ್ರದಾಯಿಕ ಉಡುಪನ್ನು ಧರಿಸಿ ಜಾನಪದ ಗೀತೆಗಳನ್ನು ಹಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸ್ಥಳೀಯ ವ್ಯಕ್ತಿ, ಸೋನು ಸೂದ್ ಅವರು ಈ ಹಿಂದೆ ಜನರಿಗೆ ಸಹಾಯ ಮಾಡಿದ ರೀತಿ ಕೇವಲ ಭಾರತ ಮಾತ್ರವಲ್ಲ, ವಿಶ್ವಕ್ಕೆ ಮನ್ನಣೆ ನೀಡಿದೆ. ಅವರಿಗೆ ವಿಶ್ವಸಂಸ್ಥೆಯು ಎಸ್ ಡಿಜಿ ವಿಶೇಷ ಮಾನವೀಯ ಕ್ರಿಯೆ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟಿದೆ. ಹೀಗಾಗಿ ನಮ್ಮ ಊರಿನ ಪರವಾಗಿ ಅವರಿಗೆ ದೇವಸ್ಥಾನ ಕಟ್ಟಲು ನಿರ್ಧರಿಸಿದೆವು ಎಂದಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಭಾರೀ ಪ್ರಶಂಸೆಗೆ ಒಳಗಾಗಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago