ಮಂಗಳೂರು: ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ. ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ ಶೆಟ್ಟಿ. ಮೂಲತ ಮಂಗಳೂರಿನವರಾದ ಇವರು ಇದೀಗ ಬಿಗ್ ಬಾಸ್ ಶೋ ಒಳಗೆ ಎಂಟ್ರಿ ಕೊಟ್ಟು ತಮ್ಮ ಪ್ರದರ್ಶನ ನೀಡುತ್ತಿದ್ದಾರೆ.
ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ಮಂಗಳೂರು,ಕಾಸರಗೋಡು ಮತ್ತು ಉಡುಪಿ ಜಿಲೆಯಲ್ಲಿ ಮುಗಿಸಿರುವ ಪೃಥ್ವಿ ವಿದ್ಯಾಭ್ಯಾಸದ ಬಳಿಕ ಫ್ಯಾಷನ್ ಫೀಲ್ಡ್ ಗೆ ವಾಲಿದ್ದರು. ಕಾಲೇಜು ದಿನಗಳಲ್ಲಿಯೇ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡು ಯಶಸ್ಸು ಕಂಡಿದ್ದ ಪೃಥ್ವಿ ಬಳಿಕದ ದಿನಗಳಲ್ಲಿ ಚಿತ್ರರಂಗ ಮತ್ತು ಟಿವಿ ಶೋಗಳಲ್ಲಿ ಅಭಿನಯಿಸುವ ಇಚ್ಛೆಯಿಂದ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಬೆಳೆಸಿದ್ದರು.
ಹಲವು ಸಣ್ಣ-ಪುಟ್ಟ ಧಾರಾವಾಹಿಗಳಲ್ಲಿ ನಟಿಸಿರುವ ಪೃಥ್ವಿ ಶೆಟ್ಟಿಗೆ ಉತ್ತಮ ಬ್ರೇಕ್ ದೊರೆತಿದ್ದು, ಪ್ರೀತಿಯ ಅರಸ ಮತ್ತು ಅರ್ಧಾಂಗಿ ಎನ್ನುವ ಟಿವಿ ಸೀರಿಯಲ್ ನಲ್ಲಿ. ಎರಡೂ ಧಾರಾವಾಹಿಗಳಲ್ಲಿ ತಮ್ಮ ಸಾಧನೆ ತೋರಿರುವ ಪೃಥ್ವಿ ಗೆ ಬಳಿಕದ ದಿನಗಳಲ್ಲಿ ತೆಲುಗು ಭಾಷೆಯ ಮೆಗಾ ಧಾರಾವಾಹಿಗಳಲ್ಲೂ ಅವಕಾಶ ದೊರೆತಿದೆ.ತೆಲುಗಿನ ಸೂಪರ್ ಹಿಟ್ ಧಾರಾವಾಹಿಯಾದ ನಾಗಪಂಚಮಿಯಲ್ಲಿನ ನಟನೆಗೆ ಪೃಥ್ವಿ ಶೆಟ್ಟಿ ಮನೆ ಮಾತಾಗಿದ್ದಾರೆ. ಈಗಾಗಲೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೃಥ್ವಿ ಆ ಚಿತ್ರಗಳಲ್ಲೂ ಯಶಸ್ಸು ಕಾಣುವ ವಿಶ್ವಾಸದಲ್ಲಿದ್ದಾರೆ.
ತೆಲುಗು ಟಿವಿ ಶೋಗಳಲ್ಲಿ ಮಿಂಚಿರುವ ಪೃಥ್ವಿಯವರನ್ನು ಅವರ ಸಾಧನೆ ಹಾಗು ಯಶಸ್ಸನ್ನು ಪರಿಗಣಿಸಿ ಬಿಗ್ ಬಾಸ್ ನ 8 ನೇ ಆವೃತ್ತಿಗೆ ಆಯ್ಕೆ ಮಾಡಲಾಗಿದೆ. ಓಟಿಂಗ್ ನಲ್ಲೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿರುವ ಪೃಥ್ವಿ ಬಿಗ್ ಬಾಸ್ ಆಗಿ ಹೊರಬರಲಿ ಎನ್ನುವ ಹಾರೈಕೆಗಳೂ ಕೇಳಿ ಬರಲಾರಂಭಿಸಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…