ಮಂಗಳೂರು: ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ. ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ ಶೆಟ್ಟಿ. ಮೂಲತ ಮಂಗಳೂರಿನವರಾದ ಇವರು ಇದೀಗ ಬಿಗ್ ಬಾಸ್ ಶೋ ಒಳಗೆ ಎಂಟ್ರಿ ಕೊಟ್ಟು ತಮ್ಮ ಪ್ರದರ್ಶನ ನೀಡುತ್ತಿದ್ದಾರೆ.
ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ಮಂಗಳೂರು,ಕಾಸರಗೋಡು ಮತ್ತು ಉಡುಪಿ ಜಿಲೆಯಲ್ಲಿ ಮುಗಿಸಿರುವ ಪೃಥ್ವಿ ವಿದ್ಯಾಭ್ಯಾಸದ ಬಳಿಕ ಫ್ಯಾಷನ್ ಫೀಲ್ಡ್ ಗೆ ವಾಲಿದ್ದರು. ಕಾಲೇಜು ದಿನಗಳಲ್ಲಿಯೇ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡು ಯಶಸ್ಸು ಕಂಡಿದ್ದ ಪೃಥ್ವಿ ಬಳಿಕದ ದಿನಗಳಲ್ಲಿ ಚಿತ್ರರಂಗ ಮತ್ತು ಟಿವಿ ಶೋಗಳಲ್ಲಿ ಅಭಿನಯಿಸುವ ಇಚ್ಛೆಯಿಂದ ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಬೆಳೆಸಿದ್ದರು.
ಹಲವು ಸಣ್ಣ-ಪುಟ್ಟ ಧಾರಾವಾಹಿಗಳಲ್ಲಿ ನಟಿಸಿರುವ ಪೃಥ್ವಿ ಶೆಟ್ಟಿಗೆ ಉತ್ತಮ ಬ್ರೇಕ್ ದೊರೆತಿದ್ದು, ಪ್ರೀತಿಯ ಅರಸ ಮತ್ತು ಅರ್ಧಾಂಗಿ ಎನ್ನುವ ಟಿವಿ ಸೀರಿಯಲ್ ನಲ್ಲಿ. ಎರಡೂ ಧಾರಾವಾಹಿಗಳಲ್ಲಿ ತಮ್ಮ ಸಾಧನೆ ತೋರಿರುವ ಪೃಥ್ವಿ ಗೆ ಬಳಿಕದ ದಿನಗಳಲ್ಲಿ ತೆಲುಗು ಭಾಷೆಯ ಮೆಗಾ ಧಾರಾವಾಹಿಗಳಲ್ಲೂ ಅವಕಾಶ ದೊರೆತಿದೆ.ತೆಲುಗಿನ ಸೂಪರ್ ಹಿಟ್ ಧಾರಾವಾಹಿಯಾದ ನಾಗಪಂಚಮಿಯಲ್ಲಿನ ನಟನೆಗೆ ಪೃಥ್ವಿ ಶೆಟ್ಟಿ ಮನೆ ಮಾತಾಗಿದ್ದಾರೆ. ಈಗಾಗಲೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೃಥ್ವಿ ಆ ಚಿತ್ರಗಳಲ್ಲೂ ಯಶಸ್ಸು ಕಾಣುವ ವಿಶ್ವಾಸದಲ್ಲಿದ್ದಾರೆ.
ತೆಲುಗು ಟಿವಿ ಶೋಗಳಲ್ಲಿ ಮಿಂಚಿರುವ ಪೃಥ್ವಿಯವರನ್ನು ಅವರ ಸಾಧನೆ ಹಾಗು ಯಶಸ್ಸನ್ನು ಪರಿಗಣಿಸಿ ಬಿಗ್ ಬಾಸ್ ನ 8 ನೇ ಆವೃತ್ತಿಗೆ ಆಯ್ಕೆ ಮಾಡಲಾಗಿದೆ. ಓಟಿಂಗ್ ನಲ್ಲೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿರುವ ಪೃಥ್ವಿ ಬಿಗ್ ಬಾಸ್ ಆಗಿ ಹೊರಬರಲಿ ಎನ್ನುವ ಹಾರೈಕೆಗಳೂ ಕೇಳಿ ಬರಲಾರಂಭಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…