ಬೆಂಗಳೂರು:ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ, ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ ಎಂದು ಸ್ಯಾಂಡಲ್ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತೆಲುಗು ಇಂಡಸ್ಟ್ರಿ ಮೇಲೆ ಗರಂ ಆಗಿದ್ದಾರೆ.
ನಂದು 50 ಸಿನಿಮಾ ಆಯ್ತು. ನನ್ನ ಕಥೆ ಬಿಡಿ. ಮುಂದೆ ಯುವನಟರ ಸಿನಿಮಾಗಳಿಗೆ ಸಮಸ್ಯೆಯಾಗುತ್ತೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ರಾಬರ್ಟ್ ಸಿನಿಮಾಗೆ ತೆಲುಗು ಇಂಡಸ್ಟ್ರಿಯಲ್ಲಿ ಅಡ್ಡಿಯಾಗುತ್ತಿರುವ ಸಂಬಂಧ ಫಿಲಂ ಚೇಂಬರ್ಗೆ ದೂರು ನೀಡಲು ಹೋಗುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ತೆಲುಗು ಸಿನಿಮಾಗಳು ಕರ್ನಾಟದಲ್ಲಿ ಯಾವುದೇ ತೊಂದರೆ ಇಲ್ಲದೇ ರಿಲೀಸ್ ಆಗುತ್ತೆ. ಆದರೆ ಆಂಧ್ರದಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತೆ ಎಂದರು.
ಕೊರೊನಾ ಬಳಿಕ ತೆಲುಗು ಸಿನಿಮಾ ಇಂಡಸ್ಟ್ರಿ ಹೊಸ ರೂಲ್ಸ್ ಜಾರಿ ಮಾಡಿಕೊಂಡಿದೆ. ಅದರ ಅನ್ವಯ ತೆಲುಗು ಸಿನಿಮಾ ಬಿಡುಗಡೆಯ ದಿನ ಬೇರೆ ಯಾವುದೇ ಪರಿಭಾಷೆಯ ಚಿತ್ರಗಳು ತಮ್ಮ ನಾಡಿನಲ್ಲಿ ಬಿಡುಗಡೆ ಮಾಡುವಂತಿಲ್ಲ ಅನ್ನೋ ನಿಯಮ ತೆಲುಗು ಸಿನಿಮಾ ಇಂಡಸ್ಟ್ರಿ ರೂಢಿಸಿಕೊಂಡಿದೆ. ಹೀಗಾಗಿ ಆಂಧ್ರ ತೆಲಂಗಾಣದಲ್ಲಿ ಮಾರ್ಚ್ 11 ಕ್ಕೆ ತೆಲುಗು ಸಿನಿಮಾ ರಿಲೀಸ್ ಇರುವ ಕಾರಣ ಕನ್ನಡದ ‘ರಾಬರ್ಟ್’ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಇದನ್ನ ಪ್ರಶ್ನಿಸಿ ದರ್ಶನ್ ಹಾಗೂ ರಾಬರ್ಟ್ ಟೀಮ್ ಇಂದು ಮಧ್ಯಾಹ್ನ ಕನ್ನಡ ಫಿಲ್ಮ್ ಚೇಂಬರ್ ಗೆ ದೂರು ನೀಡುತ್ತಿದೆ. ತೆಲುಗಿಗೆ ಡಬ್ ಆಗಿ ಮಾರ್ಚ್ 11ಕ್ಕೆ ‘ರಾಬರ್ಟ್’ ರಿಲೀಸ್ ಆಗುತ್ತಿದೆ. ಇದನ್ನ ತೆಲುಗು ಇಂಡಸ್ಟ್ರಿ ತಡೆದಿದೆ. ನಟ ದರ್ಶನ್, ನಿರ್ಮಾಪಕ ಉಮಾಪತಿ ಹಾಗೂ ನಿರ್ದೇಶಕ ತರುಣ್ ಸುಧೀರ್ ಫಿಲ್ಮ್ ಚೇಂಬರ್ಗೆ ದೂರು ಸಲ್ಲಿಸಲಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…