Featured

ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ : ಪ್ರಖ್ಯಾತ್ ಶೆಟ್ಟಿ – Vishwanews24

ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿರುವ ಆರೋಪ : ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ : ಪ್ರಖ್ಯಾತ್ ಶೆಟ್ಟಿ

ಉಡುಪಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿರುವ ಆರೋಪ ಹೊಂದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ. ಹಿಂದೆ ಒಬ್ಬ ಜವಾಬ್ದಾರಿಯುತ ನಾಯಕರಾದ ರಾಹುಲ್ ಗಾಂಧಿಯವರನ್ನು ಹೀಯಾಳಿಸಿಕೊಂಡು ಕಾಲ ಕಳೆಯುತ್ತಿದ್ದ ಬಿಜೆಪಿಗರಿಗೆ ತೇಜಸ್ವಿ ಸೂರ್ಯನ ವರ್ತನೆ ಯಾವ ರೀತಿ ಕಾಣುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಪ್ರಶ್ನಿಸಿದ್ದಾರೆ.

ಒಬ್ಬ ಜವಾಬ್ದಾರಿಯುತ ಸಂಸದನಾಗಿ ತಾನು ಹೇಗೆ ವರ್ತಿಸಬೇಕು ಎನ್ನುವ ಕನಿಷ್ಠ ಪ್ರಜ್ಞೆ ಕೂಡ ಇಲ್ಲದ ಇವರು ಕೇವಲ ಮೋದಿಯವರ ಮುಖನೋಡಿ ಇವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ ಬೆಂಗಳೂರಿನ ಜನತೆ ಈಗ ಪಶ್ಚಾತ್ತಾಪ ಪಡಬೇಕಾಗಿದೆ. ಇವರ ಇಂತಹ ಕಪಿಚೇಷ್ಠೆಯಿಂದ ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ಇದಕ್ಕೆ ಪ್ರಧಾನಿಯವರು ಹೊಣೆ ಹೊರುತ್ತಿದ್ದರೆ? ತೇಜಸ್ವಿ ಸೂರ್ಯ ಅವರಿಗೆ ಸಂಸದ ಸ್ಥಾನ ಒಂದು ರೀತಿಯಲ್ಲಿ ಮಕ್ಕಳ ಕೈಗೆ ಆಟದ ಸಾಮಾನು ಸಿಕ್ಕತಾಂಗಿದೆ. ಆಡುವ ಮಕ್ಕಳಿಗೆ ಸಂಸದನಾಗಿ ಆಯ್ಕೆ ಮಾಡಿದರೆ ಏನಾಗಲಿದೆ ಎಂಬುದಕ್ಕೆ ತೇಜಸ್ವಿ ಸೂರ್ಯ ನಿದರ್ಶನವಾಗಿದೆ.

ಈ ಹಿಂದೆ ವಿಮಾನದಲ್ಲಿ ಇಂತಹ ವರ್ತನೆ ತೋರಿದ ಪ್ರಯಾಣಿಕನಿಗೆ ಕಠಿಣ ಶಿಕ್ಷೆ ವಿಧಿಸಿದ್ದು ಸಂಸದ ಎಂಬ ಕಾರಣಕ್ಕಾಗಿ ತೇಜಸ್ವಿ ಸೂರ್ಯ ಅವರು ಕ್ಷಮೆ ಯಾಚಿಸಿದ ಕಾರಣ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ದೇಶದಲ್ಲಿ ಸಾಮಾನ್ಯರಿಗೊಂದು ನ್ಯಾಯ ದೊಡ್ಡವರಿಗೆ ಒಂದು ನ್ಯಾಯ ಎನ್ನುವುದನ್ನು ತೋರಿಸಿಕೊಡುತ್ತದೆ.

ತೇಜಸ್ವಿ ಸೂರ್ಯ ಅವರ ಇಂತಹ ಕಪಿಚೇಷ್ಠೆ ಇದೇ ಮೊದಲಲ್ಲ ಈ ಹಿಂದೆ ಉದ್ಯಾನ ನಗರಿ ಬೆಂಗಳೂರು ನೈಋತ್ಯ ಮುಂಗಾರು ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿ ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಟ ನಡೆಸುತ್ತಿದ್ದ ಸಮಯದಲ್ಲಿ ಸಂಸದ ಸೂರ್ಯ ಅವರು ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ತಿನ್ನುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಮೂಲಕ ಇವರು ಸಂಸದ ಸ್ಥಾನಕ್ಕೆ ಎಷ್ಟೊಂದು ಅರ್ಹರು ಎನ್ನುವುದು ಇವರ ವರ್ತನೆಯಿಂದ ಎದ್ದು ಕಾಣುತ್ತದೆ ಎಂದು ಪ್ರಖ್ಯಾತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

6 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

6 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago