Featured

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ

ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ ಲಾಭ ಇಲ್ಲ, ಲಾಭ ಇರೋದು ರಾಜ್ಯಕ್ಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್  ಸಮರ್ಥನೆ ಮಾಡಿಕೊಂಡಿದ್ದಾರೆ.

10 ದಿನಗಳಲ್ಲಿ 4ನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ವ್ಯಾಟ್ ಕಡಿಮೆ ಮಾಡದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಬೇಡ. ವ್ಯಾಟ್ ಕಡಿಮೆ ಮಾಡಿದರೆ ದೆಹಲಿ, ಗುಜರಾತ್ ದರಕ್ಕೆ ಪೆಟ್ರೋಲ್, ಡೀಸೆಲ್ ಸಿಗುತ್ತದೆ. ಸಿದ್ದರಾಮಯ್ಯ ತೈಲ ದರ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 

ಹಲವು ದೇಶಗಳು ತೈಲ ಬಳಕೆಯ ವಿಚಾರದಲ್ಲಿ ನಿರ್ಬಂಧ ವಿಧಿಸಿವೆ. ಆದರೆ ಇಲ್ಲಿ ಮೋದಿಯವರು ಹಾಗೆ ಮಾಡಿಲ್ಲ. ಸಿದ್ದರಾಮಯ್ಯನವರು ರಾಜಕೀಯ ಕುತಂತ್ರ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ. ಗುಜರಾತ್, ಹರಿಯಾಣ, ದೆಹಲಿಯಲ್ಲಿ ಪೆಟ್ರೋಲ್ ದರ ಕಡಿಮೆ ಇದೆ. ನಮ್ಮ ರಾಜ್ಯದಲ್ಲಿ ವ್ಯಾಟ್ ಹೆಚ್ಚು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತೈಲದ ಮೇಲಿನ ವ್ಯಾಟ್‌ನಿಂದ ರಾಜ್ಯಕ್ಕೆ 6 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ. ಅದರ ದರ ಇಳಿಸಲಿ. ಸಿದ್ದರಾಮಯ್ಯ, ಸುರ್ಜೇವಾಲ ಕಡಿದು ಕಟ್ಟೆ ಹಾಕುತ್ತೇವೆ. ಬಾಗಿಲು ಹಾಕುತ್ತೇವೆ ಅಂದರೆ ಆಗಲ್ಲ. ತಾಕತ್ ಇದ್ದರೆ ರಾಜ್ಯ ಸರ್ಕಾರ ವ್ಯಾಟ್ ಇಳಿಸಲಿ ಎಂದು ಗುಡುಗಿದ್ದಾರೆ. ಇ

ಇದನ್ನೂ ಓದಿ: 

ಯುದ್ಧದ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ. ಸಾಮಾನ್ಯ ದಿನಗಳು, ಯುದ್ಧದ ದಿನಗಳು ಒಂದೇ ಅಲ್ಲ. ಕಾಂಗ್ರೆಸ್‌ನವರಿಗೆ ಈ ಕಾಮನ್ ಸೆನ್ಸ್ ಇಲ್ಲ. ಕಾಂಗ್ರೆಸ್ ಹಾಗೂ ಕಾಕ್ರೋಚ್ ಪಕ್ಷಗಳು ಪಾಕಿಸ್ತಾನಕ್ಕೆ ಬೆಂಬಲವಾಗಿ ನಿಂತಿವೆ. ಇವೆರಡು ಪಕ್ಷಗಳು ಪಾಕಿಸ್ತಾನದ ಟೂಲ್ ಕಿಟ್, ದೇಶವಿಭಜನೆಯ ಟೂಲ್ ಕಿಟ್, ದೇಶದ್ರೋಹದ ಟೂಲ್ ಕಿಟ್ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

24 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago