ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ ಲಾಭ ಇಲ್ಲ, ಲಾಭ ಇರೋದು ರಾಜ್ಯಕ್ಕೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸಮರ್ಥನೆ ಮಾಡಿಕೊಂಡಿದ್ದಾರೆ.
10 ದಿನಗಳಲ್ಲಿ 4ನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ವ್ಯಾಟ್ ಕಡಿಮೆ ಮಾಡದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಬೇಡ. ವ್ಯಾಟ್ ಕಡಿಮೆ ಮಾಡಿದರೆ ದೆಹಲಿ, ಗುಜರಾತ್ ದರಕ್ಕೆ ಪೆಟ್ರೋಲ್, ಡೀಸೆಲ್ ಸಿಗುತ್ತದೆ. ಸಿದ್ದರಾಮಯ್ಯ ತೈಲ ದರ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:
ಹಲವು ದೇಶಗಳು ತೈಲ ಬಳಕೆಯ ವಿಚಾರದಲ್ಲಿ ನಿರ್ಬಂಧ ವಿಧಿಸಿವೆ. ಆದರೆ ಇಲ್ಲಿ ಮೋದಿಯವರು ಹಾಗೆ ಮಾಡಿಲ್ಲ. ಸಿದ್ದರಾಮಯ್ಯನವರು ರಾಜಕೀಯ ಕುತಂತ್ರ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ. ಗುಜರಾತ್, ಹರಿಯಾಣ, ದೆಹಲಿಯಲ್ಲಿ ಪೆಟ್ರೋಲ್ ದರ ಕಡಿಮೆ ಇದೆ. ನಮ್ಮ ರಾಜ್ಯದಲ್ಲಿ ವ್ಯಾಟ್ ಹೆಚ್ಚು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತೈಲದ ಮೇಲಿನ ವ್ಯಾಟ್ನಿಂದ ರಾಜ್ಯಕ್ಕೆ 6 ಸಾವಿರ ಕೋಟಿ ರೂ. ಆದಾಯ ಬರುತ್ತಿದೆ. ಅದರ ದರ ಇಳಿಸಲಿ. ಸಿದ್ದರಾಮಯ್ಯ, ಸುರ್ಜೇವಾಲ ಕಡಿದು ಕಟ್ಟೆ ಹಾಕುತ್ತೇವೆ. ಬಾಗಿಲು ಹಾಕುತ್ತೇವೆ ಅಂದರೆ ಆಗಲ್ಲ. ತಾಕತ್ ಇದ್ದರೆ ರಾಜ್ಯ ಸರ್ಕಾರ ವ್ಯಾಟ್ ಇಳಿಸಲಿ ಎಂದು ಗುಡುಗಿದ್ದಾರೆ. ಇ
ಇದನ್ನೂ ಓದಿ:
ಯುದ್ಧದ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ. ಸಾಮಾನ್ಯ ದಿನಗಳು, ಯುದ್ಧದ ದಿನಗಳು ಒಂದೇ ಅಲ್ಲ. ಕಾಂಗ್ರೆಸ್ನವರಿಗೆ ಈ ಕಾಮನ್ ಸೆನ್ಸ್ ಇಲ್ಲ. ಕಾಂಗ್ರೆಸ್ ಹಾಗೂ ಕಾಕ್ರೋಚ್ ಪಕ್ಷಗಳು ಪಾಕಿಸ್ತಾನಕ್ಕೆ ಬೆಂಬಲವಾಗಿ ನಿಂತಿವೆ. ಇವೆರಡು ಪಕ್ಷಗಳು ಪಾಕಿಸ್ತಾನದ ಟೂಲ್ ಕಿಟ್, ದೇಶವಿಭಜನೆಯ ಟೂಲ್ ಕಿಟ್, ದೇಶದ್ರೋಹದ ಟೂಲ್ ಕಿಟ್ ಎಂದು ಕಿಡಿಕಾರಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…