Featured

ತೊಕ್ಕೊಟ್ಟು:ರಾಸಾಯನಿಕ ಸಾಗಿಸುತ್ತಿದ್ದ  ಟ್ಯಾಂಕರ್ ಪಲ್ಟಿ – Vishwanews24

ತೊಕ್ಕೊಟ್ಟು:ರಾಸಾಯನಿಕ ಸಾಗಿಸುತ್ತಿದ್ದ  ಟ್ಯಾಂಕರ್ ಪಲ್ಟಿ

ಮಂಗಳೂರು: ರಾಸಾಯನಿಕ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಲಾರಿ ಕೇರಳದ ಕೊಚ್ಚಿಯಿಂದ ಬೈಕಂಪಾಡಿಯಲ್ಲಿರುವ ಪೇಂಟ್ ತಯಾರಿಸುವ ಕೈಗಾರಿಕೆಗೆ ರಾಸಾಯನಿಕ ಸಾಗಿಸುತ್ತಿದ್ದು ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅನಿಲ ಹೊಂದಿದ್ದ ಟ್ಯಾಂಕರ್ ತೆರವು ತಡರಾತ್ರಿ 1 ಗಂಟೆಯವರೆಗೆ ನಡೆಯಿತು. ಅಗ್ನಿ ಶಾಮಕ ದಳ, ಎಸಿಪಿ ಧನ್ಯಾ ಎನ್. ನಾಯಕ್, ದಕ್ಷಿಣ ಸಂಚಾರ ಠಾಣೆಯ ರಮೇಶ್ ಹಾನಾಪುರ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಸ್ಥಳದಲ್ಲಿ ಹಾಜರಿದ್ದು ತೆರವು ಕಾರ್ಯಾಚರಣೆಗೆ ಮಾರ್ಗದರ್ಶನ ಮಾಡಿದರು‌. ನಡು ರಸ್ತೆಯಲ್ಲೇ ಉರುಳಿದ್ದ ಟ್ಯಾಂಕರಿನಿಂದ ಸಣ್ಣ ಪ್ರಮಾಣದಲ್ಲಿ ರಾಸಾಯನಿಕ ಸೋರಿಕೆ ಉಂಟಾಗಿ ಪರಿಸರವಿಡೀ ದುರ್ವಾಸನೆ ಬೀರುತಿತ್ತು. ಸ್ಥಳಕ್ಕಾಗಮಿಸಿದ ಬೈಕಂಪಾಡಿ ಬಿಎಎಸ್ ಎಫ್ ಸುರಕ್ಷಾ ತಂಡ ಸಮೀಪದ ವಾಣಿಜ್ಯ ಮಳಿಗೆಗಳ ವಿದ್ಯುತ್ ದೀಪಗಳನ್ನು ಆರಿಸಲು ಸೂಚನೆ ನೀಡಿತು. ರಾ.ಹೆ.66 ರ ಎರಡೂ ಕಡೆಗಳಲ್ಲಿ ವಾಹನಗಳು ಸಂಚರಿಸದಂತೆ ಸಂಚಾರ ಠಾಣಾ ಪೊಲೀಸರು ತಡೆಹಿಡಿದಿದ್ದರು. ಬಿಎಎಸ್ ಎಫ್ ನಿಂದ ಬಂದ ಬೃಹತ್ ಗಾತ್ರದ ಕ್ರೇನ್ ಸಹಿತ ಎರಡು ಸಣ್ಣ ಕ್ರೇನ್ ಗಳನ್ನು ಬಳಸಿಕೊಂಡು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಯಿತು. ಮೊದಲಿಗೆ ಲಾರಿಯನ್ನು ಮೇಲಕ್ಕೆತ್ತಿ, ನಂತರ ಟ್ಯಾಂಕ್ ಅನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ, ಇನ್ನೊಂದು ಲಾರಿಗೆ ಲೋಡ್ ಮಾಡಿ ತಕ್ಷಣ ಕಳುಹಿಸಲಾಯಿತು. ರಾಸಾಯನಿಕ ಹೊಂದಿರುವ ಟ್ಯಾಂಕ್ ಹಲವು ಪದರಗಳು ಹಾಗೂ ಸುತ್ತಲೂ ಕಬ್ಬಿಣದ ಸುರಕ್ಷಾ ಕವಚ ಇರುವುದರಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿದೆ. ಸಾಬೂನಿಗೆ ಹಾಕುವ ರಾಸಾಯನಿಕ ಆಗಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಬಿಎಎಸ್ ಎಫ್ ಸುರಕ್ಷತಾ ಅಧಿಕಾರಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago