ಮಂಗಳೂರು: ರಾಸಾಯನಿಕ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ ಚಾಲಕ ಮಯೂರ್ (40) ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಲಾರಿ ಕೇರಳದ ಕೊಚ್ಚಿಯಿಂದ ಬೈಕಂಪಾಡಿಯಲ್ಲಿರುವ ಪೇಂಟ್ ತಯಾರಿಸುವ ಕೈಗಾರಿಕೆಗೆ ರಾಸಾಯನಿಕ ಸಾಗಿಸುತ್ತಿದ್ದು ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅನಿಲ ಹೊಂದಿದ್ದ ಟ್ಯಾಂಕರ್ ತೆರವು ತಡರಾತ್ರಿ 1 ಗಂಟೆಯವರೆಗೆ ನಡೆಯಿತು. ಅಗ್ನಿ ಶಾಮಕ ದಳ, ಎಸಿಪಿ ಧನ್ಯಾ ಎನ್. ನಾಯಕ್, ದಕ್ಷಿಣ ಸಂಚಾರ ಠಾಣೆಯ ರಮೇಶ್ ಹಾನಾಪುರ್, ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಸ್ಥಳದಲ್ಲಿ ಹಾಜರಿದ್ದು ತೆರವು ಕಾರ್ಯಾಚರಣೆಗೆ ಮಾರ್ಗದರ್ಶನ ಮಾಡಿದರು. ನಡು ರಸ್ತೆಯಲ್ಲೇ ಉರುಳಿದ್ದ ಟ್ಯಾಂಕರಿನಿಂದ ಸಣ್ಣ ಪ್ರಮಾಣದಲ್ಲಿ ರಾಸಾಯನಿಕ ಸೋರಿಕೆ ಉಂಟಾಗಿ ಪರಿಸರವಿಡೀ ದುರ್ವಾಸನೆ ಬೀರುತಿತ್ತು. ಸ್ಥಳಕ್ಕಾಗಮಿಸಿದ ಬೈಕಂಪಾಡಿ ಬಿಎಎಸ್ ಎಫ್ ಸುರಕ್ಷಾ ತಂಡ ಸಮೀಪದ ವಾಣಿಜ್ಯ ಮಳಿಗೆಗಳ ವಿದ್ಯುತ್ ದೀಪಗಳನ್ನು ಆರಿಸಲು ಸೂಚನೆ ನೀಡಿತು. ರಾ.ಹೆ.66 ರ ಎರಡೂ ಕಡೆಗಳಲ್ಲಿ ವಾಹನಗಳು ಸಂಚರಿಸದಂತೆ ಸಂಚಾರ ಠಾಣಾ ಪೊಲೀಸರು ತಡೆಹಿಡಿದಿದ್ದರು. ಬಿಎಎಸ್ ಎಫ್ ನಿಂದ ಬಂದ ಬೃಹತ್ ಗಾತ್ರದ ಕ್ರೇನ್ ಸಹಿತ ಎರಡು ಸಣ್ಣ ಕ್ರೇನ್ ಗಳನ್ನು ಬಳಸಿಕೊಂಡು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಯಿತು. ಮೊದಲಿಗೆ ಲಾರಿಯನ್ನು ಮೇಲಕ್ಕೆತ್ತಿ, ನಂತರ ಟ್ಯಾಂಕ್ ಅನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿ, ಇನ್ನೊಂದು ಲಾರಿಗೆ ಲೋಡ್ ಮಾಡಿ ತಕ್ಷಣ ಕಳುಹಿಸಲಾಯಿತು. ರಾಸಾಯನಿಕ ಹೊಂದಿರುವ ಟ್ಯಾಂಕ್ ಹಲವು ಪದರಗಳು ಹಾಗೂ ಸುತ್ತಲೂ ಕಬ್ಬಿಣದ ಸುರಕ್ಷಾ ಕವಚ ಇರುವುದರಿಂದ ಸಣ್ಣ ಪ್ರಮಾಣದಲ್ಲಿ ಸೋರಿಕೆ ಉಂಟಾಗಿದೆ. ಸಾಬೂನಿಗೆ ಹಾಕುವ ರಾಸಾಯನಿಕ ಆಗಿರುವುದರಿಂದ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಬಿಎಎಸ್ ಎಫ್ ಸುರಕ್ಷತಾ ಅಧಿಕಾರಿ ತಿಳಿಸಿದ್ದಾರೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…