ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್(46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ ಅವರನ್ನು ತಕ್ಷಣ ಬಂಧಿಸುವುದು ತನಿಖಾ ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಈವರೆಗೆ ನಡೆದ ತನಿಖೆಯಲ್ಲಿ ಈ ಕೊಲೆ ಕೃತ್ಯದಲ್ಲಿ ಇನ್ನಷ್ಟು ಆರೋಪಿಗಳು ಭಾಗಿ ಆಗಿರುವುದನ್ನು ಗುರುತಿಸಲಾಗಿದೆ. ಆರೋಪಿಗಳಿಗೆ ಕೃತ್ಯ ಎಸಗಲು ಹಾಗೂ ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಶಂಕಿತ ಕೆಲವು ವ್ಯಕ್ತಿಗಳನ್ನುವಿಚಾರಣೆಗೆ ಒಳಪಡಿಸಲಾಗುತ್ತಿದೆ. ಕೃತ್ಯದಲ್ಲಿ ಅವರ ಪಾತ್ರ ದೃಢಪಟ್ಟರೆ, ಅವರನ್ನು ಸಹ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ:
ಆರೋಪಿಗಳಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವ ಯಾರಾದರೂ ಬಿಎನ್ಎಸ್ (ಅಪರಾಧಿಗೆ ಆಶ್ರಯ ನೀಡುವ) ಸೆಕ್ಷನ್ 249(ಎ) ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಪೊಲೀಸ್ ಕಮಿಷನರ್ ಎಚ್ಚರಿಸಿದ್ದಾರೆ.
ರೌಡಿ ಶೀಟರ್ ಆಗಿದ್ದ ತಲಪಾಡಿ ಅಜ್ಜಿನಡ್ಕದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂಬಾತನನ್ನು ರಾಷ್ಟ್ರೀಯ ಹೆದ್ದಾರಿ 66 ತೊಕ್ಕೊಟ್ಟಿನ ಫ್ಲೈಓವರ್ ನಲ್ಲಿ ಶುಕ್ರವಾರ ಮುಂಜಾನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯಲಾಗಿದೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…