ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು.
ತೊಕ್ಕೊಟ್ಟುವಿನ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕರ ತಂಡವೊಂದು ಶನಿವಾರ ರಾತ್ರಿ 11.50ರ ವೇಳೆಗೆ ತೊಕ್ಕೊಟ್ಟು ಒಳಪೇಟೆ ಬಳಿ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರೆನ್ನಲಾಗಿದೆ. ಈ ವೇಳೆ ಉಳ್ಳಾಲ ಠಾಣೆಯ ಮಹಿಳಾ ಸಿಬ್ಬಂದಿ ಪೂರ್ಣಿಮಾ ಮತ್ತು ಲಕ್ಷ್ಮೀ ಎಂಬವರು ಯುವಕರಲ್ಲಿ ಮುಂದಕ್ಕೆ ಹೋಗುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಆರೋಪಿ ದೀಪಕ್ ಎಂಬಾತನು ಮುಂದಕ್ಕೆ ಹೋಗದೆ ಮೆರವಣಿಗೆಯನ್ನ ತಡೆದು ನಿಲ್ಲಿಸಿ ಪೂರ್ಣಿಮಾರಿಗೆ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ ನಿಂದಿಸಿದ್ದಾನೆಂದು ಆರೋಪಿಸಲಾಗಿದೆ.
ಮತ್ತೋರ್ವ ಆರೋಪಿ ಕಿರಣ್ ಎಂಬಾತ ಪೂರ್ಣಿಮಾ ಅವರನ್ನು ತಳ್ಳಿದ್ದು , ಮೈಗೆ ಕೈ ಹಾಕಿ ಮಾನಭಂಗ ಮಾಡಿರುವುದಾಗಿ ಪೂರ್ಣಿಮಾ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…