ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು.
ತೊಕ್ಕೊಟ್ಟುವಿನ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕರ ತಂಡವೊಂದು ಶನಿವಾರ ರಾತ್ರಿ 11.50ರ ವೇಳೆಗೆ ತೊಕ್ಕೊಟ್ಟು ಒಳಪೇಟೆ ಬಳಿ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರೆನ್ನಲಾಗಿದೆ. ಈ ವೇಳೆ ಉಳ್ಳಾಲ ಠಾಣೆಯ ಮಹಿಳಾ ಸಿಬ್ಬಂದಿ ಪೂರ್ಣಿಮಾ ಮತ್ತು ಲಕ್ಷ್ಮೀ ಎಂಬವರು ಯುವಕರಲ್ಲಿ ಮುಂದಕ್ಕೆ ಹೋಗುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಆರೋಪಿ ದೀಪಕ್ ಎಂಬಾತನು ಮುಂದಕ್ಕೆ ಹೋಗದೆ ಮೆರವಣಿಗೆಯನ್ನ ತಡೆದು ನಿಲ್ಲಿಸಿ ಪೂರ್ಣಿಮಾರಿಗೆ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ ನಿಂದಿಸಿದ್ದಾನೆಂದು ಆರೋಪಿಸಲಾಗಿದೆ.
ಮತ್ತೋರ್ವ ಆರೋಪಿ ಕಿರಣ್ ಎಂಬಾತ ಪೂರ್ಣಿಮಾ ಅವರನ್ನು ತಳ್ಳಿದ್ದು , ಮೈಗೆ ಕೈ ಹಾಕಿ ಮಾನಭಂಗ ಮಾಡಿರುವುದಾಗಿ ಪೂರ್ಣಿಮಾ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…