ಉಡುಪಿ: ತ್ರಿವಳಿ ತಲಾಖ್ ಕಾನೂನು ಜಾರಿಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಸೋಮವಾರ ತಡ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ತ್ರಿವಳಿ ತಲಾಖ್ ನೀಡಿದ ಪತಿಯ ವಿರುದ್ಧ ಪತ್ನಿ ನೀಡಿದ ದೂರಿನಂತೆ ಹಿರಿಯಡಕ ನಿವಾಸಿ ಹನೀಫ್ ಸಯ್ಯದ್ (32), ಎಂಬಾತನನ್ನು ಕುಂದಾಪುರ ಪೊಲೀಸರು ತಡ ರಾತ್ರಿ ಬಂಧಿಸಿ, ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಠಾಣೆಯಲ್ಲಿ ಸೆಕ್ಷನ್ 4ರ ಮುಸ್ಲಿಂ ಮಹಿಳೆಯರ ವಿವಾಹ ರಕ್ಷಣಾ ಕಾಯಿದೆ ಹಕ್ಕಿನಡಿ ಕೇಸು ದಾಖಲಾಗಿತ್ತು. ಜತೆಗೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವು ಸೇರಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ಕುಂದಾಪುರ ತಾಲೂಕು ಮೂಡುಗೋಪಾಡಿಯ ಮಹಿಳೆ ಅಲ್ಫಿಯಾ ಅಖ್ತರ್ ಕುಂದಾಪುರ ನಗರ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ’ಪತಿ ಹನೀಫ್ ಜತೆ ತನಗೆ ಈ ವರ್ಷ ಜುಲೈ. 4ಕ್ಕೆ ಮೂಡುಗೋಪಾಡಿಯಲ್ಲಿ ಮದುವೆಯಾಗಿದ್ದು, ಪತಿ ಮನೆಯವರು 5 ಲ. ರೂ. ವರದಕ್ಷಿಣೆ ಕೇಳಿದ್ದರು, ನಾವು 2 ಲ. ರೂ. ನೀಡಿದ್ದೆವು. ಇದೇ ಕಾರಣ ನೀಡಿ ಪತಿ ಹಾಗೂ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು. ಆ. 15ರಂದು ಪತಿ ತನಗೆ ನಿಷೇಧಿತ ತ್ರಿವಳಿ ತಲಾಖ್ ನೀಡಿದ್ದಾರೆ’ ಎಂದು ಅಲ್ಫಿಯಾ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಚಾರವಾಗಿ ಪತಿಯ ತಂದೆ ಅಬ್ಟಾಸ್ ಸಯ್ಯದ್, ತಾಯಿ ಜೈತುನ್ ಹಾಗೂ ಅಕ್ಕ ಆಯೇಷಾ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…