ಉಡುಪಿ: ತ್ರಿವಳಿ ತಲಾಖ್ ಕಾನೂನು ಜಾರಿಯಾದ ನಂತರ ಉಡುಪಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಸೋಮವಾರ ತಡ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ತ್ರಿವಳಿ ತಲಾಖ್ ನೀಡಿದ ಪತಿಯ ವಿರುದ್ಧ ಪತ್ನಿ ನೀಡಿದ ದೂರಿನಂತೆ ಹಿರಿಯಡಕ ನಿವಾಸಿ ಹನೀಫ್ ಸಯ್ಯದ್ (32), ಎಂಬಾತನನ್ನು ಕುಂದಾಪುರ ಪೊಲೀಸರು ತಡ ರಾತ್ರಿ ಬಂಧಿಸಿ, ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಠಾಣೆಯಲ್ಲಿ ಸೆಕ್ಷನ್ 4ರ ಮುಸ್ಲಿಂ ಮಹಿಳೆಯರ ವಿವಾಹ ರಕ್ಷಣಾ ಕಾಯಿದೆ ಹಕ್ಕಿನಡಿ ಕೇಸು ದಾಖಲಾಗಿತ್ತು. ಜತೆಗೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧವು ಸೇರಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ಕುಂದಾಪುರ ತಾಲೂಕು ಮೂಡುಗೋಪಾಡಿಯ ಮಹಿಳೆ ಅಲ್ಫಿಯಾ ಅಖ್ತರ್ ಕುಂದಾಪುರ ನಗರ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ’ಪತಿ ಹನೀಫ್ ಜತೆ ತನಗೆ ಈ ವರ್ಷ ಜುಲೈ. 4ಕ್ಕೆ ಮೂಡುಗೋಪಾಡಿಯಲ್ಲಿ ಮದುವೆಯಾಗಿದ್ದು, ಪತಿ ಮನೆಯವರು 5 ಲ. ರೂ. ವರದಕ್ಷಿಣೆ ಕೇಳಿದ್ದರು, ನಾವು 2 ಲ. ರೂ. ನೀಡಿದ್ದೆವು. ಇದೇ ಕಾರಣ ನೀಡಿ ಪತಿ ಹಾಗೂ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು. ಆ. 15ರಂದು ಪತಿ ತನಗೆ ನಿಷೇಧಿತ ತ್ರಿವಳಿ ತಲಾಖ್ ನೀಡಿದ್ದಾರೆ’ ಎಂದು ಅಲ್ಫಿಯಾ ದೂರಿನಲ್ಲಿ ತಿಳಿಸಿದ್ದಾರೆ. ಈ ವಿಚಾರವಾಗಿ ಪತಿಯ ತಂದೆ ಅಬ್ಟಾಸ್ ಸಯ್ಯದ್, ತಾಯಿ ಜೈತುನ್ ಹಾಗೂ ಅಕ್ಕ ಆಯೇಷಾ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…